Kannada NewsKarnataka News

ಬಿಜೆಪಿ ಮಹಿಳಾ ಮೋರ್ಚಾದಿಂದ ವೃಕ್ಷಾರೋಪಣ ಕಾರ್ಯಕ್ರಮ

ಡಾ.ಸೋನಾಲಿ ಸರ್ನೋಬತ್ ಅವರ ನೇತೃತ್ವ

 

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪಕ ಶ್ಯಾಮ್ ಪ್ರಸಾದ ಮುಖರ್ಜಿ ಅವರ ಜನ್ಮ ಶತಮಾನೋತ್ಸವ ಮತ್ತು ಬಲಿದಾನ ದಿನಾಚರಣೆ ಅಂಗವಾಗಿ ಬಿಜೆಪಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಅದರ ಅಂಗವಾಗಿ ಬೆಳಗಾವಿಯ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ಅವರ ನೇತೃತ್ವದಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 

Home add -Advt

ಹಿಂಡಲಗಾದ ವಿಠ್ಠಲ ರುಕ್ಮಿಣಿ ಮಂದಿರದ ಆವರಣದಲ್ಲಿ ಮತ್ತು ಹಿಂಡಲಗಾ ರುದ್ರಭೂಮಿಯಲ್ಲಿ ಗಿಡಗಳನ್ನು ನೆಡಲಾಯಿತು.

 ಕಾರ್ಯಕಾರಿ ಸಮಿತಿ ಸದಸ್ಯರಾದ ಜ್ಯೋತಿ ಕುಲಕರ್ಣಿ, ಚೇತನಾ ಅಗಸೇಕರ್ ಸೇರಿದಂತೆ ಹಲವಾರು ಕಾರ್ಯಕರ್ತರು, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

Related Articles

Back to top button