Belagavi NewsBelgaum NewsKannada NewsKarnataka NewsLatest

*ಹೊಸ ವರ್ಷ ಹಿನ್ನೆಲೆ; ಮಹಾಗಣಪತಿ ಹಾಗೂ ಕಪಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಕುಟುಂಬ ಸಮೇತ ಬೆಳಗಾವಿಯ ಹಿಂಡಲಗಾ ಮಹಾಗಣಪತಿಯ ಮಂದಿರಕ್ಕೆ ಭೇಟಿ ನೀದಿ ವಿಶೇಷ ಪೂಜೆ ಸಲ್ಲಿಸಿದರು.

ಇದೇ ವೇಳೆ ಕಪಿಲೇಶ್ವರ ದೇವಾಲಯಕ್ಕೆ ತೆರಳಿ, ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ ವೇಳೆ ಸಚಿವರು ಹೊಸ ವರ್ಷ ಎಲ್ಲರ ಬಾಳಿನಲ್ಲಿ ಸುಖ, ಶಾಂತಿ, ನೆಮ್ಮದಿ ಹೊತ್ತು ತರಲಿ ಎಂದು ಪ್ರಾರ್ಥಿಸಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್‌ ಹೆಬ್ಬಾಳಕರ್ ಇದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button