Kannada NewsNationalPolitics

*ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಸಿಎಂ ಕೇಜ್ರಿವಾಲ್, ಡಿಸಿಎಂ ಮನೀಶ್ ಸಿಸೋಡಿಯಾ ಖುಲಾಸೆ*

ಪ್ರಗತಿವಾಹಿನಿ ಸುದ್ದಿ: ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಒಟ್ಟು 23 ಮಂದಿಗೆ ಕೇಸ್ ನಿಂದ ವಿನಾಯಿತಿ ನೀಡಿ ದೆಹಲಿ ನ್ಯಾಯಾಲಯ ಆದೇಶ ನೀಡಿದೆ.

ಈ ಆದೇಶವನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಹೊರಡಿಸಿದ್ದಾರೆ. ದೆಹಲಿಯ ಅಬಕಾರಿ ನೀತಿ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ್ದ ಆರೋಪಪಟ್ಟಿಯನ್ನು ಪರಿಗಣಿಸಲು ನ್ಯಾಯಾಲಯ ನಿರಾಕರಿಸಿತು.

Home add -Advt

ಆರೋಪಿಗಳ ವಿರುದ್ಧ ಅಭಿಯೋಜನಾ ಸಂಸ್ಥೆಯ ಸಾಕ್ಷ್ಯಗಳಿಗೆ ಬೆಂಬಲವಾಗುವ ಯಾವುದೇ ವಸ್ತುನಿಷ್ಠ ಸಾಕ್ಷ್ಯ ದೊರಕಿಲ್ಲವೆಂದು ಕೋರ್ಟ್ ಹೇಳಿದೆ.

ದೆಹಲಿಯ ಹಿಂದಿನ ಆಪ್ ಸರ್ಕಾರದ ಈಗಿನ ಬಿಜೆಪಿ ಸರ್ಕಾರ ರದ್ದುಪಡಿಸಿರುವ ಅಬಕಾರಿ ನೀತಿಯ ಜಾರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ ಕುರಿತು ಸಿಬಿಐ ತನಿಖೆ ನಡೆಸಿ ಕೇಜ್ರಿವಾಲ್ ಮತ್ತು ಸಿಸೋಡಿಯಾ ಬಂಧಿತರಾಗಿದ್ದರು.

ದೆಹಲಿ ಅಬಕಾರಿ ನೀತಿ ಪ್ರಕರಣದ ತನಿಖೆ ವೇಳೆ ಫೆಡರಲ್ ಸಂಸ್ಥೆಯ ಸಮನ್ಸ್‌ಗಳನ್ನು ತಪ್ಪಿಸಿಕೊಂಡಿದ್ದಾರೆ ಎಂಬ ಆರೋಪದ ಎರಡು ಪ್ರಕರಣಗಳಲ್ಲಿ, ಜಾರಿ ನಿರ್ದೇಶನಾಲಯದ (ED) ಅರ್ಜಿಗಳನ್ನು ದೆಹಲಿ ನ್ಯಾಯಾಲಯವು ಜನವರಿಯಲ್ಲಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಸನ್ನು ವಜಾಗೊಳಿಸಿತ್ತು.

ನ್ಯಾಯಾಲದ ಹೋರಗೆ ಅರವಿಂದ್ ಕೇಜ್ರಿವಾಲ್ ಅವರು ಮಾಧ್ಯಮಗಳ ಮುಂದೆ ಭಾವುಕರಾಗಿ ಕಣ್ಣೀರು ಹಾಕಿದರು.

Related Articles

Back to top button