*ನವವಿವಾಹಿತ ದಂಪತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನವವಿವಾಹಿತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಜ್ಜರ ಗ್ರಾಮದಲ್ಲಿ ನಡೆದಿದೆ. ರಮೇಶ್ (28) ಹಾಗೂ ಸಹನಾ (260 ಮೃತ ದಂಪತಿ. ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ದಂಪತಿ ಈಗ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನ್ಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ. *ಚಲಿಸುತ್ತಿದ್ದ ರೈಲಿನ ಮೇಲೆ ಗುಂಡಿನ ದಾಳಿ; ನಾಲ್ವರು ಪ್ರಯಾಣಿಕರು ದುರ್ಮರಣ*