Kannada NewsKarnataka NewsLatest

*BREAKING: ನವವಿವಾಹಿತ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿ ವಿರುದ್ಧ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಹರೀಶ್ ಆತ್ಮಹತ್ಯೆಗೆ ಶರಣಾದ ಯುವಕ. ನನ್ನ ಸಾವಿಗೆ ಪತ್ನಿ ವರ್ತನೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂದಿದ್ದಾನೆ.

Home add -Advt

ತನ್ನ ಪತ್ನಿ ಬೇರೊಬ್ಬ ಯುವಕನೊಂದಿಗೆ ಮಾತನಾಡುತ್ತಿರುತ್ತಾಳೆ. ಅಕೆಯ ನಡತೆಯ ಬಗ್ಗೆ ಅನುಮಾನವಿದೆ. ಅಲ್ಲದೇ ತನಗೆ ಕಿರುಕುಳ ನೀಡುತ್ತಿದ್ದಾಳೆ. ಆಕೆಯ ಸಂಬಂಧಿಕರಿಂದ ನನಗೆ ಜೀವಬೆದರಿಕೆಯಿತ್ತು. ಪತ್ನಿ, ಆಕೆಯ ತಂದೆ-ತಾಯಿ, ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆಯಾಗಲಿ ಎಂದು ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ.

ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button