Latest

ಆತ್ಮಹತ್ಯೆಗೆ ಶರಣಾದ ನವ ದಂಪತಿ

ಪ್ರಗತಿವಾಹಿನಿ ಸುದ್ದಿ; ತುಮಕೂರು: ವೈವಾಹಿಕ ಜೀವನಕ್ಕೆ ಕಾಲಿಟ್ಟು ಕೇವಲ 6 ತಿಂಗಳು ಪೂರೈಸಿದ್ದ ನವ ದಂಪತಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೆಂಪಸಾಗರ ಗ್ರಾಮದಲ್ಲಿ ನಡೆದಿದೆ.

26 ವರ್ಷದ ಮುನಿರಾಜು ಹಾಗೂ 23 ವರ್ಷದ ವರಲಕ್ಷ್ಮಿ ಆತ್ಮಹತ್ಯೆಗೆ ಶರಣಾದ ದಂಪತಿ. 6 ತಿಂಗಳ ಹಿಂದಷ್ಟೇ ಕುಟುಂಬದವರೆಲ್ಲ ಸೇರಿ ಮುನಿರಾಜು ಹಾಗೂ ವರಲಕ್ಷ್ಮಿ ವಿವಾಹ ಮಾಡಿದ್ದರು. ಆದರೆ ಕೌಟುಂಬಿಕ ಸಮಸ್ಯೆಯ ಕಾರಣಕ್ಕೆ ಇದೀಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕುಣಿಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Home add -Advt

Related Articles

Back to top button