
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದು, ಪೊಲೀಸರು ಬಂಧಿಸಿದ್ದಾರೆ.
ವಿವಿಧ ಕಾಮಗಾರಿಗಳ ದುರ್ಬಳಕೆ, ನಕಲಿ ದಾಖಲೆ ಸೃಷ್ಟಿಸಿ 7 ಕೋಟಿ ಲೂಟಿ, ಬೇನಾಮಿ ವ್ಯಕ್ತಿಗಳ ಹೆಸರಲ್ಲಿ ಚೆಕ್ ನೀಡಿ ಹಣ ನುಂಗಿರುವ ಆರೋಪ ಸೇರಿದಂತೆ ಮೂಡಲಗಿರಿಯಪ್ಪ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದು, ಚಿತ್ರದುರ್ಗ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸತ್ಯನಾರಾಯಣರಾವ್ ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿದ್ದರು. ಬಳಿಕ ಚಿತ್ರದುರ್ಗದ ಸಿಇಎನ್ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು. ಇದೀಗ ಮೂಡಲಗಿರಿಯಪ್ಪನನ್ನು ಬಂಧಿಸಿ ವಿಚರಣೆ ನಡೆಸಿದ್ದಾರೆ.
ನಿರ್ಮಿತಿ ಕೇಂದ್ರದ ಹಣ ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಂಗಳ ಹಿಂದಷ್ಟೇ ಮೂಡಲಗಿರಿಯಪ್ಪ ಕೆಲಸಿದಿಂದ ವಜಾಗೊಂಡಿದ್ದರು. ಇದೀಗ ಪೊಲೀಸರು ಬಂಧಿಸಿದ್ದಾರೆ.