Kannada NewsLatest

*ಕೇಂದ್ರ ಸಚಿವ ನಿತಿನ್ ಗಡ್ಕರಿ ಮನೆಗೆ ಬಾಂಬ್ ಬೆದರಿಕೆ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಮನೆಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ನಿವಾಸಕ್ಕೆ ಇಂದು ಬೆಳಿಗ್ಗೆ 8:46ರ ಸುಮಾರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ವಾರ್ಧಾ ರಸ್ತೆಯಲ್ಲಿರುವ ಗಡ್ಕರಿ ಅವರ ಮನೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಇನ್ನು ಹತ್ತು ನಿಮಿಷಗಳಲ್ಲಿ ಮನೆ ಸ್ಫೋಟಗೊಳ್ಳಲಿದೆ ಎಂದಿದ್ದ.

Home add -Advt

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪ್ರತಾಪ್ ನಗರ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೆಲವೇ ಸಮಯದಲ್ಲಿ ಶಂಕಿತ ದುಷ್ಕರ್ಮಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಬಂಧಿತನನ್ನು ಉಮೇಶ್ ವಿಷ್ಣು ರಾವತ್ ಎಂದು ಗುರುತಿಸಲಾಗಿದೆ. ಮಹಲ್ ತುಳಸಿ ಬಾಗ್ ರಸ್ತೆಯ ನಿವಾಸಿ. ಈತ ಮದ್ಯದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

Related Articles

Back to top button