
ಪ್ರಗತಿವಾಹಿನಿ ಸುದ್ದಿ : ಫೋನ್ ಟ್ಯಾಪಿಂಗ್ ಬಗ್ಗೆ ಇದುವರೆಗೂ ಯಾರೂ ದೂರು ದಾಖಲಿಸಿಲ್ಲ. ದೂರು ಕೊಟ್ಟರೆ ಕ್ರಮ ಕೈಗೊಳ್ಳುವುದಾಗಿ ಗೃಹಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಈ ಬಗ್ಗೆ ಆರೋಪ ಮಾಡಿದ್ದಾರೆ. ನಾನು ಈ ಸಂಬಂಧ ಪೊಲೀಸ್ ಇಲಾಖೆಯಲ್ಲಿ ವಿಚಾರಿಸಿದ್ದು ಇದುವರೆಗೂ ಯಾವುದೇ ದೂರು ದಾಖಲಾಗಿರುವ ಬಗ್ಗೆ ಮಾಹಿತಿಯಿಲ್ಲ.
ಹನಿಟ್ರ್ಯಾಪ್ ಹಗರಣದ ಬಗ್ಗೆಯೂ ಇದುವರೆಗೂ ಯಾರೂ ದೂರು ನೀಡಿಲ್ಲ ಎಂದು ಹೇಳಿದರು.