ಇಂದಿನಿಂದ ಉಚಿತ ಬಸ್ ವ್ಯವಸ್ಥೆ ಇಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಲಸೆ ಕಾರ್ಮಿಕರಿಗೆ ಮಾಡಲಾಗಿದ್ದ ಉಚಿತ ಬಸ್​ ವ್ಯವಸ್ಥೆ ನಿನ್ನೆಗೆ ಕೊನೆಗೊಂಡಿದೆ. ಹಾಗಾಗಿ ಇಂದಿನಿಂದ ಯಾವುದೇ ಉಚಿತ ಬಸ್ಸುಗಳು ಇರುವುದಿಲ್ಲ ಎಂದು ಕೆಎಸ್​ಆರ್​​ಟಿಸಿ ತಿಳಿಸಿದೆ.

ಲಾಕ್ ಡೌನ್ ಹಿನ್ನಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಒಂದು ವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 1,‌08,300 ಕಾರ್ಮಿಕರನ್ನು ಕೆಎಸ್​ಆರ್​​ಟಿ ಬಸ್​ಗಳಲ್ಲಿ ಸ್ಥಳಾಂತರ ಮಾಡಲಾಗಿದೆ. ಸುಮಾರು 3610 ಬಸ್​ಗಳಲ್ಲಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಕಳಿಸಿಕೊಡಲಾಗಿದೆ ಎಂದು ಕೆಎಸ್​ಆರ್​​ಟಿಸಿ ಪ್ರಕಟಣೆ ಹೊರಡಿಸಿದೆ.

ರಾಜ್ಯದ ಮೂಲೆ ಮೂಲೆಗಳಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರು ತಮ್ಮ ಊರುಗಳಿಗೆ ವಾಪಸ್ಸಾಗುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಸಿಲುಕಿಕೊಂಡ ಹೊರ ರಾಜ್ಯದ ಕಾರ್ಮಿಕರ ಗೋಳು ಕೇಳುವವರೇ ಇಲ್ಲದಂತಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button