
3.65 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಚಾಲನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಅಭಿವೃದ್ಧಿ ವಿಷಯದಲ್ಲಿ ಯಾರೂ ರಾಜಕಾರಣ ಮಾಡಬಾರದು. ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಬೇಕೆನ್ನುವ ನನ್ನ ಸಂಕಲ್ಪದಲ್ಲಿ ಯಾವುದೇ ಹಿಂಜರಿಕೆ ಇಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.

ಸರಕಾರ ಯಾವುದೇ ಬಂದರೂ ಪಕ್ಷ ಭೇದ ಮಾಡದೆ ಎಲ್ಲ ಕ್ಷೇತ್ರಗಳಿಗೂ ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆ ಮಾಡಬೇಕು. ಬೆಳಗಾವಿ ಗ್ರಾಮೀಣ ಕ್ಷೇತ್ರದಂತಹ ಅತ್ಯಂತ ಹಿಂದುಳಿದ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಬೇಕು. ಈ ಕ್ಷೇತ್ರ ಕಳೆದ ಹಲವಾರು ವರ್ಷಗಳಿಂದ ಅಭಿವೃದ್ಧಿ ಯೋಜನೆಗಳಿಂದ ವಂಚಿತವಾಗಿತ್ತು. ಹಾಗಾಗಿ ಸಹಜವಾಗಿ ಸರಕಾರ ಹೆಚ್ಚಿನ ಹಣ ನೀಡಬೇಕಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ವಿವರಿಸಿದರು.

ಕಾಮಗಾರಿಯ ಪೂಜಾ ಸಂದರ್ಭದಲ್ಲಿ ಹಿರಿಯರು, ಗ್ರಾಮದ ಜನತೆ, ಯುವರಾಜ ಕದಂ, ಜಿಲ್ಲಾ ಪಂಚಾಯತ್ ಸದಸ್ಯರಾದ ಮಾಧುರಿ ಹೆಗಡೆ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಚೇತನ ಅಷ್ಟಗೇಕರ್, ರಾಮಚಂದ್ರ ಕುದ್ರೆಮನಿಕರ್, ವಿಠ್ಠಲ ದೇಸಾಯಿ, ಮಿಥುನ ಉಸೂಲಕರ್, ಗ್ರಾಮ ಪಂಚಾಯತ್ ಮಾಜಿ ಸದಸ್ಯ ವಿಠ್ಠಲ ಬೆಳಗಾಂವಕರ್, ಕೃಷ್ಣ ಪಾವಸೆ, ಪ್ರಕಾಶ ಬೆಳಗಾಂವಕರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.