ಕಡ್ಡಾಯ ವರ್ಗಾವಣೆಗೊಂಡ ಶಿಕ್ಷಕರ ಪರ ಅಧಿಸೂಚನೆ ಪ್ರಕಟ; ಆಕ್ಷೇಪಣೆಗೆ 7 ದಿನ ಅವಕಾಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಈ ಹಿಂದೆ ಕಡ್ಡಾಯ ವರ್ಗಾವಣೆಗೊಂಡಿರುವ ಶಿಕ್ಷಕರಿಗೆ ಕೋರಿಕೆಯ ಮೇಲೆ ಪುನರ್ ವರ್ಗಾವಣೆ ಮಾಡಲು ವಿಶೇಷ ರಾಜ್ಯಪತ್ರ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಿ ಜೂನ್ 3ರಂದು ಈ ಅಧಿಸೂಚನೆ ಪ್ರಕಟಿಸಲಾಗಿದೆ.

2019 -20ನೇ ಸಾಲಿನಲ್ಲಿ ಕಡ್ಡಾಯ ವರ್ಗಾವಣೆಗೊಂಡಿರುವ ಶಿಕ್ಷಕರಿಗೆ ವಿಶೇಷ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೆ ಅವಕಾಶ ಕಲ್ಪಿಸುವ ಕುರಿತು ಈ ಗೆಜೆಟ್ ಮೂಲಕ ಅವಕಾಶ ಕಲ್ಪಿಸಲಾಗಿದೆ. ಶಿಕ್ಷಕರು ಬಿ ಅಥವಾ ಸಿ ವಲಯವನ್ನು ಆಯ್ಕೆ ಮಾಡಿಕೊಳ್ಳಬೇಕು. ಈ ಎರಡರಲ್ಲೂ ಸ್ಥಳಾವಕಾಶ ಲಭ್ಯವಿಲ್ಲದ ಪಕ್ಷದಲ್ಲಿ ಎ ವಲಯದಲ್ಲಿ ಸ್ಥಳ ಆಯ್ಕೆ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಗೆಜೆಟ್ ನೋಟಿಫಿಕೇಶನ್ ಪೂರ್ಣ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ –  2521

500 ಕೋಟಿ ರೂ. ಪ್ಯಾಕೇಜ್, ಜೂನ್ 14ರ ವರೆಗೆ ಲಾಕ್ ಡೌನ್ ವಿಸ್ತರಣೆ – ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button