Belagavi NewsBelgaum NewsKannada NewsKarnataka News

ಧರ್ಮ ಗ್ರಂಥದ ಮೇಲಿನ ಶೃದ್ಧೆ ಕಡಿಮೆಯಾಗಿದ್ದರಿಂದ ಭಗವದ್ಗೀತೆ ಮೇಲೆ ಪ್ರಮಾಣ ಸ್ವೀಕಾರ ಕಡಿಮೆಯಾಗಿದೆ – ಸ್ವರ್ಣವಲ್ಲೀ ಶ್ರೀ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಧರ್ಮ ಗ್ರಂಥದ ಮೇಲಿನ ಶೃದ್ಧೆ ಕಡಿಮೆಯಾಗಿದ್ದರಿಂದ ಭಗವದ್ಗೀತೆ ಮೇಲೆ ನ್ಯಾಯಾಲಯಗಳಲ್ಲಿ ಪ್ರಮಾಣ ಸ್ವೀಕರಿಸುವ ಪದಧತಿ ಕಡಿಮೆಯಾಗಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧಿಕಾರಿ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ.

ಬೆಳಗಾವಿಯನ್ನು ಕೇಂದ್ರವಾಗಿಟ್ಟುಕೊಂಡು ನಡೆಸಲಾಗುತ್ತಿರುವ ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನದ ಪೂರ್ವಭಾವಿಯಾಗಿ ಭಾನುವಾರ ಬೆಳಗಾವಿಯ ಗೀತ -ಗಂಗಾ ಕಟ್ಟಡದಲ್ಲಿ ನಡೆದ ನ್ಯಾಯವಾದಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಮ್ಮಲ್ಲಿ ನೈತಿಕತೆಯ ಪಥನವಾಗುತ್ತಿದೆ. ಹಾಗಾಗಿ ಅಪರಾಧ ಪ್ರಕರಣ ಹೆಚ್ಚುತ್ತಿದೆ. ಆದ್ಯಾತ್ಮಿಕತೆಯ ಬಲವಿದ್ದರೆ ನೈತಿಕತೆ ಗಟ್ಟಿಯಾಗಿ ಉಳಿಯುತ್ತದೆ ಎಂದು ಸ್ವಾಮಿಗಳು ಹೇಳಿದರು.

ಅನಧಿಕೃತವಾಗಿ ಹಣ ಮಾಡುವುದು ಹೆಚ್ಚಾಗುತ್ತಿದೆ. ದೇಶದ ಉದ್ದಗಲಕ್ಕೂ ನೈತಿಕತೆಯ ಪಥನವಾಗುತ್ತಿದೆ. ವಿವಾಹ ವಿಚ್ಛೇಧನ ಪರಕರಣಗಳೂ ಹೆಚ್ಚಾಗುತ್ತಿವೆ. ಕುಟುಂಬ ವ್ಯವಸ್ಥೆ ದುರ್ಬಲವಾಗುತ್ತಿದೆ. ಆದ್ಯಾತ್ಮಿಕ ಚಿಂತನೆ ಇದ್ದರೆ ಅಪರಾಧ ಪ್ರಕರಣ ಕಡಿಮೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಭಗವದ್ಗೀತೆ ಅಭಿಯಾನ ನಡೆಸಲಾಗುತ್ತಿದೆ. ನಾವು ಜೈಲಿನಲ್ಲಿ ಅಭಿಯಾನ ಮಾಡಿದ ಅನೇಕ ಕಡೆ ಜೈಲಿನಿಂದ ಹೊರಬಂದವರ ಮನ ಪರಿವರ್ತನೆ ಆದ ಉದಾಹರಣೆ ಇದೆ ಎಂದು ಶ್ರೀಗಳು ತಿಳಿಸಿದರು.

Home add -Advt

ಅಭಿಯಾನ ಸಮಿತಿಯ ಸಂಚಾಲಕ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಎಂ.ಕೆ.ಹೆಗಡೆ, ಹವ್ಯಕ ಮಂಡಳ ಅಧ್ಯಕ್ಷೆ ಪೂರ್ಣಿಮಾ ಹೆಗಡೆ, ವಿದ್ವಾನ್ ಸೂರ್ಯನಾರಾಯಣ ಭಟ್, ಶ್ರೀಧರ ಗುಮಾನಿ, ಶ್ರೀಪಾದ ಭಟ್, ಎಂ.ಟಿ.ಹೆಗಡೆ, ಅರುಣ ನಾಯ್ಕ್, ಪತ್ರಕರ್ತ ದಿಲೀಪ ಕುರಂದವಾಡೆ ಹಾಗೂ ನ್ಯಾಯವಾದಿಗಳು ಉಪಸ್ಥಿತರಿದ್ದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button