Belagavi NewsBelgaum NewsKannada NewsKarnataka News

ಶನಿವಾರ 8 ರಂದು ಡಾ.ಪ್ರಭಾಕರ ಕೋರೆ ಅಭಿನಂದನಾ ಸಮಾರಂಭ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಇವರ ಅವಿಶ್ರಾಂತ 40 ವರ್ಷಗಳ ಕೆಎಲ್‍ಇ ಸೇವಾ ಸ್ಮರಣೆ ನಿಮಿತ್ತ ಶನಿವಾರ 8 ಜೂನ 2024 ರಂದು ಮುಂಜಾನೆ 10.30 ಗಂಟೆಗೆ ಬೆಳಗಾವಿ ನೆಹರು ನಗರದ ಕನ್ನಡ ಭವನದಲ್ಲಿ ಅಭಿನಂದನ ಸಮಾರಂಭವನ್ನು ಆಯೋಜಿಸಲಾಗಿದೆ.
ಈ ಸಮಾರಂಭವನ್ನು ಕೆಎಲ್‍ಇ ಸಂಸ್ಥೆಯ ನಿವೃತ್ತ ಆಜೀವ ಸದಸ್ಯರು, ಪ್ರಾಚಾರ್ಯರು, ಪ್ರಾಧ್ಯಾಪಕರು, ಅಧ್ಯಾಪಕರು, ಇತರ ಸಿಬ್ಬಂದಿ, ಬೆಳಗಾವಿಯ ಸಂಘಸಂಸ್ಥೆಗಳು, ಕನ್ನಡ ಭವನ ಆಡಳಿತ ಮಂಡಳಿ ಪದಾಧಿಕಾರಿಗಳು ಮತ್ತು ನಿರ್ದೇಶಕರು ಹಾಗೂ ಆಪ್ತಮಿತ್ರರು ಹಮ್ಮಿಕೊಂಡಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ರಾಣಿ ಚೆನ್ನಮ್ಮ ವಿವಿ ಕುಲಪತಿಗಳಾದ ಡಾ.ಸಿ.ಎಂ.ತ್ಯಾಗರಾಜ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳಗಾವಿಯ ನಿವೃತ್ತ ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ ಆಗಮಿಸಲಿದ್ದಾರೆ. ಯುಎಸ್‍ಎಂ-ಕೆಎಲ್‍ಇ ನಿರ್ದೇಶಕರಾದ ಡಾ.ಎಚ್.ಬಿ.ರಾಜಶೇಖರ, ಬೆಳಗಾವಿ ಸ್ಪೋಟ್ರ್ಸ ಹಾಗೂ ಬೆಳಗಾಮ್ ಎಜ್ಯುಕೇಶನ್ ಸೊಸೈಟಿ ಚೇರಮನ್ ಅವಿನಾಶ ಪೋತದಾರ, ಖ್ಯಾತ ಸಾಹಿತಿಗಳಾದ ಡಾ.ವಿ.ಎಸ್.ಮಾಳಿ, ಡಾ.ಬಸವರಾಜ ಜಗಜಂಪಿ, ಡಾ.ಗುರುದೇವಿ ಹುಲೆಪ್ಪನವರಮಠ, ಕೆಎಲ್‍ಇ ನಿವೃತ್ತ ಜಂಟಿ ಕಾರ್ಯದರ್ಶಿ ಡಾ.ವಿ.ಬಿ.ಹಿರೇಮಠ, ಇನ್‍ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಅಧ್ಯಕ್ಷರಾದ ಎಸ್.ವೈ.ಕುಂದರಗಿ ಅಭಿನಂದನ ನುಡಿಗಳನ್ನಾಡಲಿದ್ದಾರೆ ಎಂದು ಸಂಘಟಕರಾದ ಡಾ.ಎಚ್.ಬಿ.ರಾಜಶೇಖರ, ಪ್ರಿ.ಬಿ.ಎಸ್.ಗವಿಮಠ, ಡಾ. ಎಫ್.ವ್ಹಿ.ಮಾನ್ವಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button