Film & EntertainmentKarnataka NewsLatest
*ನಟ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ 231 ಸಾಕ್ಷ್ಯಗಳನ್ನು ಒಳಗೊಂಡ 3,991 ಪುಟಗಳ ಚಾರ್ಜ್ ಶೀಟನ್ನು ಸಲ್ಲಿಕೆ ಮಾಡಲಾಗಿದೆ. ಚಾರ್ಜ್ ಶೀಟ್ ಜೊತೆಗೆ ಎಫ್ ಎಸ್ ಎಲ್ ವರದಿಯಲ್ಲಿ ಪೊಲೀಸರು ಸಲ್ಲಿಸಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ 17 ಆರೋಪಿಗಳ ಭವಿಷ್ಯ ಚಾರ್ಜ್ ಶೀಟ್ ನಲ್ಲಿದೆ.




