ಒಂದು ಸಾಲಿನ ನಾಗೇಂದ್ರ ರಾಜಿನಾಮೆ ಪತ್ರ: ಏನಿದೆ ಅದರಲ್ಲಿ?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – `ನನ್ನ ಸ್ವ ಇಚ್ಛೆಯಿಂದ ರಾಜಿನಾಮೆ ಸಲ್ಲಿಸುತ್ತಿದ್ದೇನೆ’ ಈ ಒಂದು ಸಾಲಿನ ರಾಜಿನಾಮೆ ಪತ್ರವನ್ನು ಸಚಿವ ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಜಮೀರ್ ಅಹ್ಮದ್ ಮತ್ತಿತರರು ಇದ್ದರು. ವಾಲ್ಮೀಕಿ ಅಭಿವೃದ್ಧಿ ಮಂಡಳಿಯಲ್ಲಿ ನಡೆದಿರುವ ಅವ್ಯವಹಾರ ಸಂಬಂಧ ಸಚಿವ ನಾಗೇಂದ್ರ ಸಚಿವ ಸ್ಥಾನಕ್ಕೆ ತಮ್ಮ ರಾಜಿನಾಮೆ ಸಲ್ಲಿಸಿದರು. ಇದಕ್ಕೂ ಮೊದಲು ಅವರು ಪತ್ರಿಕಾಗೋಷ್ಠಿ ನಡೆಸಿದ್ದರು. ಸ್ವಯಂ ನಿರ್ಧಾರದಿಂದ ರಾಜಿನಾಮೆ – ಸಚಿವ ನಾಗೇಂದ್ರ