ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
4 ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆಯಿಂದಾಗಿ ನಲುಗಿಹೋಗಿರುವ ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ ಈಗ ಮತ್ತೊಂದು ಉನ್ನತ ಹುದ್ದೆಯ ಬದಲಾವಣೆಗೆ ಸಾಕ್ಷಿಯಾಗಿದೆ.
ಸ್ಮಾರ್ಟ್ ಸಿಟಿ ಯೋಜನೆಯ ಪ್ರಧಾನ ವ್ಯವಸ್ಥಾಪಕ (ತಾಂತ್ರಿಕ) ರನ್ನು ಬದಲಾಯಿಸಿ ಸರಕಾರ ಆದೇಶ ಹೊರಡಿಸಿದೆ.
ಕೆ.ಎಫ್.ಹುಲಕುಂದ್ ಅವರನ್ನು ಸ್ಮಾರ್ಟ್ ಸಿಟಿ ಪ್ರಧಾನ ವ್ಯವಸ್ಥಾಪಕ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.
ಆ ಹುದ್ದೆಗೆ ಹುಬ್ಬಳ್ಳಿ ಸ್ಮಾರ್ಟ್ ಸಿಟಿ ಪ್ರಧಾನ ವ್ಯವಸ್ಥಾಪಕ (ತಾಂತ್ರಿಕ) ರನ್ನು ಪ್ರಭಾರ ಅಧಿಕಾರಿಯಾಗಿ ನೇಮಿಸಲಾಗಿದೆ.