Belagavi NewsBelgaum NewsKannada NewsKarnataka News

*ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ವಿಶೇಷ ಬಸ್ ವ್ಯವಸ್ಥೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025 ನೇ ಸಾಲಿನ ವಾ.ಕ.ರ.ಸಾ.ಸಂಸ್ಥೆ, ಚಿಕ್ಕೋಡಿ ವಿಭಾಗದಿಂದ ಗಣೇಶ ಹಬ್ಬದ ಪ್ರಯುಕ್ತ ಆಗಸ್ಟ್, 27. 2025 ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

Home add -Advt

ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ, ಹುಕ್ಕೇರಿ, ಗೋಕಾಕ, ರಾಯಬಾಗ ಹಾಗೂ ಅಥಣಿ ಘಟಕಗಳಿಂದ ಬೆಂಗಳೂರು, ಪೂಣೆ, ಸಾತಾರಾ, ಇಚಲಕರಂಜಿ, ಕೊಲ್ಲಾಪೂರ, ಮಿರಜ ಹಾಗೂ ಇತರೇ ಅಂತರ ರಾಜ್ಯ ಮಾರ್ಗಗಳಿಗೆ ಆಗಸ್ಟ್ 22 ರಿಂದ 31 ರ ವರೆಗೆ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಗಣೇಶ ಹಬ್ಬ ಆಚರಿಸಲು ಬರುವ ಪ್ರಯಾಣಿಕರಿಗಾಗಿ ವಿಭಾಗದ ಎಲ್ಲ ಘಟಕಗಳಿಂದ ಮೂರು ದಿನಗಳ ಕಾಲ (ಆಗಸ್ಟ, 22,25,26) ಹೆಚ್ಚುವರಿ ವಾಹನಗಳನ್ನು ಬೆಂಗಳೂರಿನಿಂದ ವಿಭಾಗದ ತಾಲೂಕು ಕೇಂದ್ರಗಳಿಗೆ ಕಾರ್ಯಾಚರಣೆ ಮಾಡಲಾಗುವುದು. ಸಾರ್ವಜನಿಕ ಪ್ರಯಾಣಿಕರು ಈ ವಿಶೇಷ ಹೆಚ್ಚುವರಿ ಸಾರಿಗೆಗಳ ಪ್ರಯೋಜನ ಪಡೆಯಬಹುದಾಗಿದೆ ಎಂದು ಚಿಕ್ಕೋಡಿ ವಿಭಾಗ ವಾ.ಕ.ರ.ಸಾ.ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button