Latest

ಶಿಕ್ಷಣ ಕ್ಷೇತ್ರದ 20ಕ್ಕೂ ಹೆಚ್ಚು ಸಮಸ್ಯೆ; ಸೋಮವಾರ ಮಹತ್ವದ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರುಶಿಕ್ಷಣ ಕ್ಷೇತ್ರದ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಶಿಕ್ಷಣ ಸಚಿವರೊಂದಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ  ಸೋಮವಾರ ಮಹತ್ವದ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ವಿಧಾನ ಪರಿಷತ್ತಿನ ಸದಸ್ಯರು, ಅಧಿಕಾರಿಗಳು ಭಾಗಿ ಸಹ ಭಾಗಿಯಾಗಲಿದ್ದಾರೆ.

ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ  ಬಸವರಾಜ ಹೊರಟ್ಟಿ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರೊಂದಿಗೆ  ಬೆಂಗಳೂರಿನ ವಿಧಾನ ಸೌಧದಲ್ಲಿ  ಸಭೆ ನಡೆಸಲಿದ್ದಾರೆ.

ವಿಧಾನ ಸೌಧದ ಮೊದಲನೇ ಮಹಡಿಯ  ಕೊಠಡಿ ಸಂಖ್ಯೆ: 106 ರಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಆಯೋಜಿಸಲಾಗಿದ್ದು ಈ ಸಭೆಯಲ್ಲಿ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರಗಳಿಂದ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯರು ಹಾಗೂ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು, ನಿರ್ದೇಶಕರು ಸೇರಿದಂತೆ ಶಿಕ್ಷಣ ಇಲಾಖೆಯ ಹಲವು ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

1995 ರಿಂದ 2014-15ನೇ ಸಾಲಿನಲ್ಲಿ ಪ್ರಾರಂಭವಾಗಿರುವ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಲ್ಲಿ ಬೋಧಕ/ಬೋಧಕೇತರ ಸಿಬ್ಬಂದಿಗಳನ್ನು ವೇತನಾನುದಾನಕ್ಕೆ ಒಳಪಡಿಸುವದು, ಬಸವರಾಜ ಹೊರಟ್ಟಿ ಅವರ ನೇತೃತ್ವದ ಕಾಲ್ಪನಿಕ ವೇತನ ಸಮಿತಿಯು ನೀಡಿದ ವರದಿಯನ್ನು ಸರಕಾರ ಒಪ್ಪಿಕೊಂಡು ಅನುಷ್ಠಾನಗೊಳಿಸುವುದು, ಅನುದಾನ ರಹಿತ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಸಿಬ್ಬಂದಿಗೆ ಕನಿಷ್ಠ ವೇತನ ಹಾಗೂ ಸೇವಾ ಭದ್ರತೆ ಒದಗಿಸುವ ಸರಕಾರಿ ಆದೇಶವನ್ನು ಜಾರಿಗೊಳಿಸುವುದು, ಸರ್ಕಾರಿ ಮತ್ತು ಅನುದಾನಿತ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ 70:1 ರ ಬದಲಾಗಿ 40:1 ರಂತೆ ಅನುಪಾತವನ್ನು ನಿಗದಿಪಡಿಸುವುದು ಸೇರಿದಂತೆ 20ಕ್ಕೂ ಹೆಚ್ಚು ಮಹತ್ವದ ವಿಷಯಗಳ ಕುರಿತು  ಸುದೀರ್ಘ ಚರ್ಚೆ ನಡೆಯಲಿದೆ.
ಗಾಂಜಾ ಮಾರಾಟದಲ್ಲಿ ತೊಡಗಿದ್ದ ಪೊಲೀಸರು; ಇನ್ಸ್ ಪೆಕ್ಟರ್ ಸೇರಿ 7 ಜನರು ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button