106 ಜನರಿಗೆ ಪದ್ಮ ಪ್ರಶಸ್ತಿ ಪ್ರಕಟ : ರಾಜ್ಯದ 8 ಸಾಧಕರಿಗೆ ಪ್ರಶಸ್ತಿ

ಪ್ರಗತಿವಾಹಿನಿ ಸುದ್ದಿ, ನವದೆಹಲಿ : ದೇಶದ 106 ಜನರಿಗೆ ಪದ್ಮ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕರ್ನಾಟಕದ 8 ಜನರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಾಜಿ ಮುಖ್ಯಮಂತ್ರಿಯೂ ಆಗಿರುವ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರಿಗೆ ಪದ್ಮ ವಿಭೂಷಣ ಘೋಷಿಸಲಾಗಿದೆ. ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ಹಾಗೂ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಪದ್ಮ ಭೂಷಣ ನೀಡಲಾಗಿದೆ.

Home add -Advt

ಕೊಡಗಿನ ಜಾನಪದ ನರ್ತಕಿ ರಾಣಿ ಮಾಚಯ್ಯ, ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಖಾದರ್ ವಲ್ಲಿ ದೂದೇಕುಲ, ಕಲೆ ವಿಭಾಗದಲ್ಲಿ ತಮಟೆಯ ತಂದೆ ಎಂದು ಪ್ರಖ್ಯಾತರಾದ ನಾಡೋಜ ಪಿಂಡಿಪಾಪನಹಳ್ಳಿ ಮುನಿ ವೆಂಕಟಪ್ಪ ಮತ್ತು ಐ ಶಾ ರಶೀದ್ ಅಹಮದ್ ಕ್ವಾದ್ರಿ, ಪುರಾತತ್ವ ಶಾಸ್ತ್ರ ವಿಭಾಗದಲ್ಲಿ ಸುಬ್ಬರಾಮನ್ ಅವರಿಗೆ ಪದ್ಮ ಪ್ರಶಸ್ತಿ ಲಭಿಸಿದೆ.
6 ಜನರಿಗೆ ಪದ್ಮ ವಿಭೂಷಣ, 9 ಜನರಿಗೆ ಪದ್ಮ ಭೂಷಣ ಹಾಗೂ 91 ಜನರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.

ಜಿಲ್ಲಾಧಿಕಾರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ

 

https://pragati.taskdun.com/state-level-award-presentation-to-the-collector/

Related Articles

Back to top button