Belagavi NewsBelgaum NewsKannada NewsKarnataka News

*ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಮಹಿಳೆ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತರನ್ನು ವಿಜಯಲಕ್ಷ್ಮಿ ಮತ್ತು ಅವರ ಒಂದು ವರ್ಷದ ಮಗ ಭುವನ್ ಹಾಗೂ 4 ವರ್ಷದ ಮಗಳು ಬೃಂದಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Home add -Advt

ವಿಜಯಲಕ್ಷ್ಮಿ ಮತ್ತು ಅವರ ಪತಿ ರಮೇಶ್ ಮೂಲತಃ ರಾಯಚೂರು ಜಿಲ್ಲೆಯ ಮಸ್ಕಿಯವರಾಗಿದ್ದು, ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ರಮೇಶ್ ಇಲ್ಲಿನ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಗುರುವಾರ ರಾತ್ರಿ ಗಂಡ ರಮೇಶ್ ಇಲ್ಲದ ಸಮಯದಲ್ಲಿ ಪತ್ನಿ ವಿಜಯಲಕ್ಷ್ಮೀ ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾನೂ ಫ್ಯಾನಿಗೆ ಕೊರಳೊಡ್ಡಿದ್ದಾರೆ. ಶುಕ್ರವಾರ ವಿಜಯಲಕ್ಷ್ಮೀ ತಂಗಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆ ಬಳಿಕ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ

ಸ್ಥಳಕ್ಕೆ ಆಗಮಿಸಿದ ಬಾಗಲಗುಂಟೆ ಪೊಲೀಸರು ಮೃತದೇಹಗಳನ್ನ ನೇಣಿನ ಕುಣಿಕೆಯಿಂದ ಇಳಿಸಿ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್​ ಮಾಡಿದ್ದಾರೆ.

Related Articles

Back to top button