LatestUncategorized

*ಭೀಕರ ಅಪಘಾತ; ಮಗು ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕಾರು ಹಾಗೂ ತೂಫಾನ್ ವಾಹನದ ನಡಿವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಬಳಿ ಸಂಭವಿಸಿದೆ.

ಕಾರು ಬೇಲೂರಿನಿಂದ ಕುಕ್ಕು ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿತ್ತು. ಈ ವೇಳೆ ಬಿಳಿನೆಲೆ ಬಳಿ ಎದುರಿನಿಂದ ಬರುತ್ತಿದ್ದ ತೂಫಾನ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಓರ್ವ ಮಗು, ಮಹಿಳೆ ಹಾಗೂ ಇಬ್ಬರು ಪುರುಷರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Home add -Advt

ಮೃತರ ಗುರುತು ಪತ್ತೆಯಾಗಿಲ್ಲ. ತೂಫಾನ್ ವಾಹನದಲ್ಲಿದ್ದ ಹಲವರು ಗಾಯಗೊಂಡಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://pragati.taskdun.com/lakshmana-savadireactionjagadish-shettarb-l-santosh/

Related Articles

Back to top button