Kannada NewsKarnataka NewsLatest

*ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮತ್ತೊಂದು ಕೃತ್ಯ; ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ, ಕೊಲೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಹಾನಗಲ್ ನಲ್ಲಿ ಮಹಿಳೆಯನ್ನು ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದ ಪ್ರಕರಣ, ಯುವತಿಯ ಕಿಡ್ನ್ಯಾಪ್ ಪ್ರಕರಣದ ಬೆನ್ನಲ್ಲೇ ಇದೀಗ ಮಂಡ್ಯದಲ್ಲಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಜಮೀನಿನಲ್ಲಿ ಮಹಿಳೆಯ ಬೆತ್ತಲ ಮೃತದೇಹ ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಲೆ ಮಡಿರುವ ಶಂಕೆ ವ್ಯಕ್ತವಾಗಿದೆ.

Home add -Advt

ಮಹಿಳೆಯ ಮೃತದೇಹ ಸಿಕ್ಕಿರುವ ಎರಡು ಕಿ.ಮೀ ದೂರದಲ್ಲಿ ಮಹಿಳೆಯ ಮನೆಯಿದ್ದು, ಆಕೆ ಸ್ವಲ್ಪ ಬುದ್ಧಿಮಾಂದ್ಯೆಯಾಗಿದ್ದರು ಎಂದು ತಿಳಿದುಬಂದಿದೆ. ಆಗಾಗ ಮನೆಯಿಂದ ಹೊರ ಹೋಗುವುದು ಮತ್ತೆ ಮನೆಗೆ ಬರುವುದು ಮಾಡುತ್ತಿದ್ದ ಮಹಿಳೆ ಮೂರ್ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಳು. ಆದಾಗ್ಯೂ ಮನೆಯವರಾರೂ ಮಹಿಳೆ ಮನೆಗೆ ಬಂದಿಲ್ಲ ಎಂದು ಅಷ್ಟಾಗಿ ಕಾಳಜಿಯನ್ನೂ ಮಾಡಿಲ್ಲ. ಇದೀಗ ಮಹಿಳೆಯ ಮೃತದೇಹ ರಸ್ತೆ ಬದಿ ಜಮಿನಿನಲ್ಲಿ ಪತ್ತೆಯಾಗಿದ್ದು, ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳ್ಳೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಕೆಲ ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಆತಂಕಕ್ಕೆ ಕಾರಣವಾಗಿದ್ದು, ಮಹಿಳೆಯರ ಸುರಕ್ಷತೆ ಬಗ್ಗೆಯೇ ಭಯ ಹುಟ್ಟಿಸುವಂತೆ ಮಾಡಿದೆ.


Related Articles

Back to top button