Latest
ಸಿಎಂ ಬಿಎಸ್ ವೈಗೆ ಮಠಾಧೀಶರ ಬೆಂಬಲ; ನನ್ನದು ತಟಸ್ಥ ನಿಲುವು ಎಂದ ಪಂಚಮಸಾಲಿ ಪೀಠದ ಜಗದ್ಗುರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಿಎಸ್ ವೈ ಬದಲಾವಣೆ ವಿಚಾರದಲ್ಲಿ ನಮ್ಮದು ತಟಸ್ಥ ನಿಲುವು. ಈ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಗಣ್ಯಾತಿಗಟ್ಯ ಮಥಾಧೀಶರು ಸಿಎಂ ಯಡಿಯೂರಪ್ಪ ಪರ ನಿಂತಿದ್ದಾರೆ. ಈ ಬಗ್ಗೆ ನಾನು ಮಾತನಾಡಲ್ಲ. ಸಿಎಂ ಸ್ಥಾನಕ್ಕೆ ನಾನು ಯಾರ ಹೆಸರನ್ನೂ ಸೂಚಿಸಲ್ಲ. ಸಮರ್ಥನ್ನು ಬಿಜೆಪಿ ಹಿರಿಯ ನಾಯಕರೇ ಆಯ್ಕೆ ಮಾಡಲಿ ಎಂದು ಹೇಳಿದರು.
ಸಿಎಂ ಬದಲಾವಣೆ ಮಾಡಿದರೆ ಉತ್ತರ ಕರ್ನಾಟಕ ಭಾಗಕ್ಕೆ ಅವಕಾಶ ನಿದಬೇಕು. ಕಳಂಕ ರಹಿತ, ರಾಜ್ಯವನ್ನು ಸಮರ್ಥವಾಗಿ ನಡೆಸುವ ವೀರಶೈವ ಲಿಂಗಾಯಿತ ಸಮುದಾಯ ನಾಯಕನಿಗೆಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಸ್ವಾಮೀಜಿಗಳೇ, ನಿಮಗೆ ನಿಮ್ಮ ನಿಜವಾದ ಕರ್ತವ್ಯದ ಬಗ್ಗೆ ನೆನಪು ಮಾಡುತ್ತಾ….
ರಾಜೀನಾಮೆ ವಿಚಾರ ಕೇಳುತ್ತಿದ್ದಂತೆ ಫುಲ್ ಗರಂ ಆದ ಸಚಿವ ಭೈರತಿ




