*ಪಂಚಾಯ್ತಿ ಚುನಾವಣೆ ವೇಳೆ ಗುಂಡಿನ ದಾಳಿ, ಹಿಂಸಾಚಾರ; 9 ಜನರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಪಂಚಾಯತ್ ಚುನಾವಣೆ ವೇಳೆ ಹಿಂಸಾಚಾರ, ಗಲಭೆ ನಡೆದಿದ್ದು 9 ಜನರನ್ನು ಹತ್ಯೆಗೈದಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ನಡೆದಿದೆ. ಪಂಚಾಯತ್ ಚುನಾವಣೆಯ ಮತದಾನದ ವೇಳೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಸಿಕ್ಕ ಸಿಕ್ಕವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ಅಧಿಕಾರಿ ಸೇರಿ 9 ಜನರು ಸಾವನ್ನಪ್ಪಿದ್ದಾರೆ. ಮುಷಿದಾಬಾದ್ ಸೇರಿದಂತೆ ಪಶ್ಚಿಮ ಬಂಗಾಳದ ಹಲವೆಡೆ ಹಿಂಸಾಚಾರ ಭುಗಿಲೆದ್ದಿದ್ದು, ಮತಗಟ್ಟೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. … Continue reading *ಪಂಚಾಯ್ತಿ ಚುನಾವಣೆ ವೇಳೆ ಗುಂಡಿನ ದಾಳಿ, ಹಿಂಸಾಚಾರ; 9 ಜನರ ಹತ್ಯೆ*