Karnataka NewsLatestPolitics

*ಕೆ.ಹೆಚ್.ಮುನಿಯಪ್ಪ ಸಿಎಂ ಆದರೆ ಸ್ವಾಗತ ಎಂದ ಪರಮೇಶ್ವರ್; ಕುತೂಹಲ ಮೂಡಿಸಿದ ಗೃಹ ಸಚಿವರ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡುವರೆ ವರ್ಷ ಪೂರೈಸುತ್ತಿರುವ ಹೊತ್ತಲ್ಲೇ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಬರುತ್ತಿದೆ. ಈ ಸಂದರ್ಭದಲ್ಲೇ ಕೆ.ಹೆಚ್.ಮುನಿಯಪ್ಪ ಸಿಎಂ ಆದರೆ ಸ್ವಾಗತ ಮಾಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಮುನಿಯಪ್ಪ ಸಿಎಂ ಆದರೆ ಸಂತೋಷ. ಅವರು ಏಳು ಬಾರಿ ಎಂಪಿ ಆದವರು. ಕಾಂಗ್ರೆಸ್ ನ ಹಿರಿಯ ನಾಯಕರು, ಸಮರ್ಥರು ಹಾಗೂ ಅರ್ಹರಿದ್ದಾರೆ. ಹಾಗಾಗಿ ಅವರು ಮುಖ್ಯಮಂತ್ರಿಯಾದರೆ ಸಂತೋಷಪಡುತ್ತೇನೆ ಎಂದರು.

ತುಳಿತಕ್ಕೊಳಗಾಗಿರುವ ವರ್ಗಕ್ಕೆ ಆಡಳಿತ ಸಿಗಬೇಕು. ಅಂತಹ ವರ್ಗಕ್ಕೆ ಆಡಳಿತ ಸಿಗುತ್ತದೆ ಅಂದರೆ ಸಂತೋಷ. ಅವರು ಕೂಡ ಅಂತಹ ವರ್ಗದಿಂದ ಬಂದ ನಾಯಕರಾಗಿದ್ದಾರೆ ಎಂದು ಹೇಳಿದರು.

Home add -Advt

Related Articles

Back to top button