Film & Entertainment

*ಮಹಾಕುಂಭ ಮೇಳದಲ್ಲಿ ಶಾಹಿ ಸ್ನಾನ ಮಾಡಿ ಧನ್ಯಳಾದೆ ಎಂದ ಪವಿತ್ರಾ ಗೌಡ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಶಾಹಿ ಸ್ನಾನ ಮಾಡಿದ್ದಾರೆ.

‘ಮೌನಿ ಅಮವಾಸ್ಯೆಯಂದು ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೇ ಧನ್ಯಳು. ಎಲ್ಲ ನಕಾರಾತ್ಮಕ ಶಕಿಯಿಂದ ಮುಕ್ತಳಾಗಿದ್ದೇನೆ ಎಂದು ನಂಬಿದ್ದೇನೆ. ಹರಹರ ಮಹಾದೇವ್’ ಎಂದು ಸಾಮಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

Home add -Advt

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜಾಮೀನು ಮೇಲೆ ಬಿಡುಗಡೆಯಾಗಿರುವ ಪವಿತ್ರಾ ಗೌಡ ಸಲು ಸಾಲು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಈಗ ಪ್ರಯಾಗ್ ರಾಜ್ ನಲ್ಲಿ ಕುಂಭಮೇಳದಲ್ಲಿ ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ.

Related Articles

Back to top button