Kannada NewsKarnataka NewsLatest

*PDO ಗೀತಾಮಣಿ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಪಂಚಾಯತ್ ಗ್ರಂಥಪಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓ ಅವರನ್ನು ಅಮಾನತು ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ಕೆಲಸ ಹಾಗೂ ಸಂಬಳದ ವಿಚಾರದಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪಂಚಾಯತ್ ಲೈಬ್ರರಿಯನ್ ರಾಮಚಂದ್ರಯ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ತ್ಯಾಮಗೊಂಡು ಪೊಲೀಸ್ ಠಾಣೆಯಲ್ಲಿ ರಾಮಚಂದ್ರಯ್ಯ ಸಹೋದರನ ಮಗ ದೂರು ನೀಡಿದ್ದರು.

Home add -Advt

ಪ್ರಕರಣ ಸಂಅಬ್ಂಧ ಪಿಡಿಓ ಗೀತಾಮಣಿ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎಸ್, ಪಿಡಿಓ ಗೀತಾಮಣಿ ಅವರನ್ನು ಅಮಾನತು ಮಾಡಿ ಮಾಡಿ ಆದೇಶ ಹೊರಡಿಸಿದ್ದಾರೆ.


Related Articles

Back to top button