Latest

*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO, ಕಂಪ್ಯೂಟರ್ ಆಪರೇಟರ್*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: 4 ಸಾವಿರ ರೂಪಾಯಿಗೆ ಲಂಚಕ್ಕೆ ಕೈಯೊಡ್ದಿದ್ದ ಗ್ರಾಮ ಪಂಚಾಯತ್ ಪಿಡಿಓ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜಾನಕಲ್ ನಲ್ಲಿ ನಡೆದಿದೆ.

ಪಿಡಿಒ ಶ್ರೀನಿವಾಸ್ ಹಾಗೂ ಕಂಪ್ಯೂಟರ್ ಆಪರೇಟರ್ ಚನ್ನಬಸಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ಶಾಲಾ ಕಾಂಪೌಂಡ್ ಕಾಮಗಾರಿಗಾಗಿ 4 ಸಾವಿರ ರೂಪಾಯಿ ಲಂಚ ನೀಡುವಂತೆ ಭೀಮಪ್ಪ ಎಂಬುವವರಿಗೆ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಭೀಮಪ್ಪ ಅವರಿಂದ 4 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪಿಡಿಓ ಹಾಗೂ ಕಂಪ್ಯೂಟರ್ ಆಪರೇಟರ್ ಇಬ್ಬರೂ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ.

*DFO ವೆಂಕಟೇಶ್ ಗೆ ಲೋಕಾಯುಕ್ತ ಶಾಕ್*

Home add -Advt

https://pragati.taskdun.com/dfokolaralokayukta-raid/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button