Belagavi NewsBelgaum NewsKannada NewsKarnataka News
ರೈತ ಹೋರಾಟಗಾರ್ತಿ ಜಯಶ್ರೀ ಗುರವನ್ನವರ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅನಾರೋಗ್ಯ ನಿಮಿತ್ತ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈತ ಹೋರಾಟಗಾರ್ತಿ ಜಯಶ್ರೀ ಗುರವಣ್ಣವರ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ.
ಕಬ್ಬಿನ ಬೆಲೆ, ಬೆಳೆಗಳಿಗೆ ಬೆಂಬಲ ಬೆಲೆ, ರೈತರ ಹೊಲಗಳಿಗೆ ರಸ್ತೆ, ನರೇಗಾ ಯೋಜನೆಯ ಸಮರ್ಪಕ ಅನುಷ್ಠಾನ, ಕಾರ್ಮಿಕರ ಬದುಕು ಭವಣೆಗಳ ಬಗೆಗೆ ಜಯಶ್ರೀ ತೀವ್ರ ಹೋರಾಟ ನಡೆಸಿ ಗಮನ ಸೆಳೆದಿದ್ದರು. ನಡುವಯಸ್ಸಿನಲ್ಲಿ ಜಯಶ್ರೀ ಅವರ ಸಾವು ರೈತ ಹೋರಾಟಕ್ಕೆ ಹಿನ್ನಡೆ ತಂದಿದೆ.




