
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬಿಜೆಪಿ ಸರಕಾರದ ಆಡಳಿತ ವೈಖ್ಯರಿಗೆ ಜನರು ಬೇಸತ್ತಿದ್ದು, ಬಿಜೆಪಿಗೆ ಬುದ್ದಿ ಕಲಿಸಲು ಯಾವಾಗ ಚುನಾವಣೆ ಬರುತ್ತದೆ ಎಂದು ಕಾಯುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ರಾಮಲಿಂಗಾ ರಡ್ಡಿ ಹೇಳಿದ್ದಾರೆ.

ಬೆಳಗಾವಿ ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾತನಾಡಿ, ಕಾಂಗ್ರೆಸ್ ನಿಂದ ಮಾತ್ರ ದೇಶದಲ್ಲಿ ಅಭಿವೃದ್ಧಿ ಸಾಧ್ಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಜನಸಾಮಾನ್ಯರು ನೆಮ್ಮದಿಯಿಂದ ಬದುಕಲು ಸಾಧ್ಯ. ಹಾಗಾಗಿ ಸಂಪೂರ್ಣ ಜಿಲ್ಲೆಯ ಅಭಿವೃದ್ಧಿಗಾಗಿ ನನಗೆ ಮತ ನೀಡಿ ಎಂದು ವಿನಂತಿಸಿದರು.

ಲೋಕಸಭೆಯನ್ನು ಪ್ರತಿನಿಧಿಸಬಲ್ಲ ಸಮರ್ಥ ಅಭ್ಯರ್ಥಿ ಸತೀಶ್ ಜಾರಕಿಹೊಳಿ. ಅವರನ್ನು ಬೆಂಬಲಿಸುವ ಮೂಲಕ ನಮ್ಮ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಅವಕಾಶ ಮಾಡಿಕೊಳ್ಳೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಯರಾಮ್ ಪಾಟೀಲ, ನಾಮದೇವ್, ರಿಯಾಜ್ ಪಠಾಣ್, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ