Karnataka News

*ಪೆಟ್ರೋಲ್ ಬಂಕ್ ನಲ್ಲೇ ನೇಣಿಗೆ ಶರಣಾದ ಯುವಕ*

ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್ ಬಂಕ್ ನಲ್ಲಿಯೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿಯಲ್ಲಿ ನಡೆದಿದೆ.

ಯಶವಂತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಚಿಕ್ಕಬಳ್ಳಾಪುರ ನಗರದ ಬಾಪೂಜಿನಗರ ನಿವಾಸಿ.

Home add -Advt

ಪೆಟ್ರೋಲ್ ಬಂಕ್ ಮಾಲೀಕ ವರುಣ್ ಕರೆ ಮಾಡಿದರೂ ಯಶವಂತ್ ಫೋನ್ ರಿಸೀವ್ ಮಾಡಿರಲಿಲ್ಲ. ಇದರಿಂದ ಮಾಲೀಕ ಪೆಟ್ರೋಲ್ ಬಂಕ್ ಗೆ ಬಂದು ನೋಡಿದ್ದಾರೆ. ಈ ವೇಳೆ ಯುವಕ ಪೆಟ್ರೋಲ್ ಬಂಕ್ ಕಚೇರಿಯಲ್ಲಿಯೇ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button