
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಫ್ ಐ ಸಂಘಟನೆ ಮುಖಂದರ ಮೇಲಿದ್ದ ಕೇಸ್ ಗಳನ್ನು ವಾಪಸ್ ಪಡೆದಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕಂದಾಯ ಸಚಿವ ಆರ್.ಅಶೋಕ್, ರಾಜ್ಯಕ್ಕೆ ಪಿಎಫ್ ಐ ಭಾಗ್ಯ ಕೊಟ್ಟವರೂ ಸಿದ್ದರಾಮಯ್ಯನವರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್.ಅಶೋಕ್, ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಪಿಎಫ್ ಐ ವಿರುದ್ಧ ದಾಖಲಾಗಿದ್ದ ಕೇಸ್ ಗಳನ್ನು ವಾಪಸ್ ಪಡೆದಿದ್ದರು. ಯಾವ ಯಾವ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣ ವಾಪಸ್ ಪಡೆಯಲಾಗಿದೆ ಎಂಬುದನ್ನು ದಾಖಲೆ ಸಮೇತ ಬಿಡಿಗಡೆ ಮಾಡುತ್ತಿದ್ದೇನೆ ಎಂದರು.
ಪಿಎಫ್ ಐ ಹಾಗೂ ಕೆ ಎಫ್ ಡಿ ವಿರುದ್ಧ ಒಟ್ಟು 1600 ಕೇಸ್ ದಾಖಲಾಗಿತ್ತು. ಪೊಲೀಸರು ಹಾಗೂ ಸಾರ್ವಜನಿಕರ ಏಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಸಿದ್ದರಾಮಯ್ಯ ಈ ಎಲ್ಲಾ ಕೇಸ್ ಹಿಂಪಡೆದಿದ್ದಾರೆ. ಈಗ ನಾನು ಹೇಳಿದ್ಮೇಲೇ ಪಿಎಫ್ ಐ ನಿಷೇಧ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಅಲ್ಲದೇ ರಾಜ್ಯಕ್ಕೆ ಎಲ್ಲಾ ಭಾಗ್ಯಗಳನ್ನು ಕೊಟ್ಟಿದ್ದು ನಾನೇ ಎನ್ನುತ್ತಿದ್ದಾರೆ. ಈ PFI ಭಾಗ್ಯ ಕೊಟ್ಟಿದ್ದೂ ಅವರೇ. ಹಾಗಾಗಿ ಸಿದ್ದರಾಮಯ್ಯ ವಿರುದ್ಧ ಪಿಎಫ್ ಐ ಭಾಗ್ಯ ಪೋಸ್ಟರ್ ಬಿಡುಗಡೆ ಮಾಡಿದ್ದೇವೆ ಎಂದು ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.
ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ; 2 ದಿನ ರಾಜ್ಯದಲ್ಲೇ ವಾಸ್ತವ್ಯ
https://pragati.taskdun.com/politics/sonia-gandhimysorebharath-jodo-yatred-k-shivakumar/