
ಪ್ರಗತಿವಾಹಿನಿ ಸುದ್ದಿ: ಛತ್ತೀಸ್ಗಢದ ಕವಾರ್ಧ ಜಿಲ್ಲೆಯಲ್ಲಿ ಸುಮಾರು 25-30 ಕಾರ್ಮಿಕರಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಾಹ್ಪನಿ ಪ್ರದೇಶದ ಕಂದಕಕ್ಕೆ ಉರುಳಿ ಭೀಕರ ಅಪಘಾತ ಸಂಭವಿಸಿದ್ದು, 18 ಕಾರ್ಮಿಕರು ಮೃತಪಟ್ಟಿದ್ದಾರೆ.
ಸೋಮವಾರ ಬೆಳಗಿನ ಜಾವವೇ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಈ ಅಪಘಾತದಲ್ಲಿ 8 ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬೈಗಾ ಬುಡಕಟ್ಟು ಸಮುದಾಯದ 25-30 ಜನರ ಗುಂಪು ಸಾಂಪ್ರದಾಯಿಕ ತೆಂಡು ಎಲೆಗಳನ್ನು ಸಂಗ್ರಹಿಸಿ ಪಿಕಪ್ ಟ್ರಕ್ನಲ್ಲಿ ಹಿಂತಿರುಗುತ್ತಿತ್ತು. ಆದರೆ ಬಹಪಾನಿ ಪ್ರದೇಶದ ಬಳಿ 20 ಅಡಿ ಆಳದ ಕಂದಕಕ್ಕೆ ವಾಹನ ಬಿದ್ದಿದೆ. ಈ ವೇಳೆ ಹಲವರಿಗೆ ಗಾಯಗಳಾಗಿದ್ದು, 18 ಮಂದಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ವೇಳೆ ಇದ್ದವರೆಲ್ಲರೂ ಎಲ್ಲರೂ ಕುಯಿ ನಿವಾಸಿಗಳು ಎನ್ನಲಾಗಿದೆ.
ಬೈಗಾ ಸಮುದಾಯದವರು ಬೀಡಿ ತಯಾರಿಸುವ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇದಕ್ಕಾಗಿ ಅವರು ತೆಂಡು ಎಲೆಗಳನ್ನು ಸಂಗ್ರಹಿಸುತ್ತಾರೆ.