ಹಸಿದ ಹೊಟ್ಟೆಗೆ ಅನ್ನ ಕೊಡುವ ಪುಣ್ಯದ ಕೆಲಸ ಕಾಂಗ್ರೆಸ್ ನಿಂದ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ​ಬಿಜೆಪಿಯವರು ಕೊಳ್ಳೆ ಹೊಡೆದು ಬಿಟ್ಟು ಹೋಗಿದ್ದ ರಾಜ್ಯದಲ್ಲಿ ಎಲ್ಲವನ್ನೂ ಸರಿಪಡಿಸಿ, ಹಸಿದ ಹೊಟ್ಟೆಗಳಿಗೆ ಅನ್ನ ನೀಡುವ ಪುಣ್ಯದ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ​ ಮಂಗಳವಾರ, ತಾಲೂ​ಕು ಆಡಳಿತ, ತಾಲೂ​ಕು ಪಂಚಾಯತ ಬೆಳಗಾವಿ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಹಮ್ಮಿಕೊಂಡಿರುವ ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಾವೇಶ​ ಉದ್ಘಾಟಿಸಿ​ ಅವರು ಮಾತನಾಡಿ​ದರು. … Continue reading ಹಸಿದ ಹೊಟ್ಟೆಗೆ ಅನ್ನ ಕೊಡುವ ಪುಣ್ಯದ ಕೆಲಸ ಕಾಂಗ್ರೆಸ್ ನಿಂದ – ಲಕ್ಷ್ಮೀ ಹೆಬ್ಬಾಳಕರ್