Kannada NewsKarnataka NewsLatestUncategorized

*PI, PSI ಸೇರಿ ಐವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಹೊನ್ನಾವರ: ಪೊಲೀಸ್ ಠಾಣೆಯಲ್ಲಿ ಆರೋಪಿ ವಿಷ ಸೇವಿಸಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಐ, ಪಿಎಸ್ ಐ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

Home add -Advt

ಪಾಲಿಶ್ ಮಾಡುವ ನೆಪದಲ್ಲಿ ಬಂಗಾರ ಕಳ್ಳತನ ಮಾದುತ್ತಿದ್ದ ಆರೋಪದಲ್ಲಿ ನಿನ್ನೆ ಹೊನ್ನಾವರ ಠಾಣೆ ಪೊಲೀಸರು ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ಅವರಲ್ಲಿ ಓರ್ವ ಆರೋಪಿ ನಿನ್ನೆ ಸಂಜೆ ಠಾಣೆಯಲ್ಲೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದ.

ಈ ಪ್ರಕರಣ ಸಂಬಂಧ ಈಗ ಹೊನ್ನಾವರ ಪೊಲೀಸ್ ಠಾಣೆಯ ಪಿಐ ಮಂಜುನಾಥ್, ಪಿಎಸ್ ಐ ಮಂಜೇಶ್ವರ್ ಚಂದಾವರ್, ಕಾನ್ಸ್ ಟೇಬಲ್ ಗಳಾದ ಮಹಾವೀರ್, ರಮೇಶ್ ಹಾಗೂ ಸಂತೋಷ್ ಅವರನ್ನು ಅಮಾನತುಗೊಳಿಸಿ ಆದೇಶ ನೀಡಲಾಗಿದೆ.


Related Articles

Back to top button