Belagavi NewsBelgaum NewsKannada NewsKarnataka NewsNational

*ಬೆಳಗಾವಿಗೆ ಬರುತ್ತಿದ್ದ ವಿಮಾನ ಪತನ*

ಪ್ರಗತಿವಾಹಿನಿ ಸುದ್ದಿ: ಕಲಬುರಗಿಯಿಂದ ಬೆಳಗಾವಿಯತ್ತ ತೆರಳುತಿದ್ದ ಖಾಸಗಿ ವಿಮಾನ ಪತನಗೊಂಡಿರುವ ಘಟನೆ ನಡೆದಿದೆ

ಈ ಅವಘಡದಲ್ಲಿ ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ಹೊಲವೊಂದರಲ್ಲಿ ವಿಮಾನ ಪತನವಾಗಿದೆ. 

ಮೇಲ್ನೋಟಕ್ಕೆ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡಿದೆ ಎಂದು ಹೇಳಲಾಗುತ್ತಿದೆ. ವಿಮಾನ ಪತನಗೊಂಡಿರುವುದನ್ನು ಕಂಡ ಗ್ರಾಮಸ್ಥರು ಹೊಲಕ್ಕೆ ಧಾವಿಸಿ ವಿಮಾನದಲ್ಲಿದ್ದ ಸಿಬ್ಬಂದಿಗಳ ರಕ್ಷಣೆ ಮಾಡಿದ್ದು ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಸಾಗಿಸಿದ್ದಾರೆ. 

Home add -Advt

Related Articles

Back to top button