Kannada NewsKarnataka NewsLatestPolitics

*BREAKING: ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಫೋಟಕ ಪತ್ತೆ: ಪೊಲೀಸ್ ಅಧಿಕಾರಿ ಸೇರಿ 6 ಸಿಬ್ಬಂದಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಫೋಟಕಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪೊಲಿಸ್ ಅಧಿಕಾರಿ ಸೇರಿ 6 ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಮೇ ೧೦ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಹೊರವಲಯದ ಆರ್ಟ್ ಆಫ್ ಲೀವಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಂದು ಅವರು ತೆರಳುವ ಮಾರ್ಗದಲ್ಲಿ ಕಗ್ಗಲಿಪುರ ವಡೇರಹಳ್ಳಿ ಗೇಟ್ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು. ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಭಾರಿ ಭದ್ರತೆ ಏರ್ಪಡಿಸಿದ್ದರೂ ಮಾರ್ಗದಲ್ಲಿ ಸ್ಫೋಟಕಗಳು ಪತ್ತೆಯಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿತ್ತು. ಎನ್ ಐಎ ಅಧಿಕಾರಿಗಳು ಕೂಡ ಸ್ಥಳ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Home add -Advt

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಕರ್ತವ್ಯಲೋಪ ಆರೋಪದಲ್ಲಿ ಓರ್ವ ಪೊಲೀಸ್ ಅಧಿಕಾರಿ ಆರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಬೆಂಗಳೂರು ದಕ್ಷಿಣ ಎಸ್ ಪಿ ಆದೇಶ ಹೊರಡಿಸಿದ್ದಾರೆ.

ಓರ್ವ ಪಿಎಸ್ ಐ, ಓರ್ವ ಎ ಎಸ್ ಐ ಹಾಗೂ ನಾಲ್ವರು ಪೇದೆಗಳು ಅಮಾನತುಗೊಂಡವರು.

Related Articles

Back to top button