Kannada NewsKarnataka NewsLatest

*ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಪರ್ಯಾಯ ಪುತ್ತಿಗೆ ಮಠ ಮತ್ತು ಶ್ರೀಕೃಷ್ಣಮಠಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಉಡುಪಿಗೆ ಆಗಮಿಸಲಿದ್ದು, ಈಗಾಗಲೇ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿದಿದ್ದಾರೆ.

ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ್ದಾರೆ. ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕವಾಗಿ ಉಡುಪಿಗೆ ತೆರಳಲಿದ್ದಾರೆ.

Home add -Advt

ಆದಿ ಉಡುಪಿಯಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತಲುಪಲಿದ್ದಾರೆ. ಉಡುಪಿಯಲ್ಲಿ ಬೆಳಿಗ್ಗೆ 11:30ಕ್ಕೆ ರೋಡ್ ಶೋ ಮೂಲಕವಾಗಿ ಶ್ರೀಕೃಷ್ಣಮಠಕ್ಕೆ ತರುಳುತ್ತಾರೆ. ಅಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಮೋದಿ ಪಾಲ್ಗೊಳ್ಳಲಿದ್ದು, ಈ ವೇಳೆ ಪ್ರಧಾನಿ ಮೋದಿ ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ. ಬಳಿಕ ಉಡುಪಿಯಲ್ಲಿ ವಿವಿಧಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.

Related Articles

Back to top button