Latest

ಪುರಾತನ ಅನ್ನಪೂರ್ಣಾ ದೇವಿ ವಿಗ್ರಹ ಭಾರತಕ್ಕೆ ವಾಪಸ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: 1913ರಲ್ಲಿ ಭಾರತದಿಂದ ಕದ್ದೊಯ್ಯಲಾಗಿದ್ದ ಅನ್ನಪೂರ್ಣಾ ದೇವಿ ವಿಗ್ರಹವನ್ನು ಕೆನಡಾದಿಂದ ವಾಪಸ್ ತರಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಜನಪ್ರಿಯ ರೆಡಿಯೋ ಕಾರ್ಯಕ್ರಮ 71ನೇ ಮನ್ ಕೀ ಬಾತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಈ ವಿಗ್ರಹವನ್ನು ಉತ್ತರ ಪ್ರದೇಶದ ವಾರಾಣಸಿಯಿಂದ 1913ರಲ್ಲಿ ಕಳ್ಳತನ ಮಾಡಿ ಕದ್ದೊಯ್ಯಲಾಗಿತ್ತು. ಇದೀಗ ಆ ಪ್ರತಿಮೆಯನ್ನು ವಾಪಸ್ ತರಲಾಗುತ್ತಿದೆ ಎಂಬುದು ಸಂತಸದ ವಿಚಾರ ಎಂದರು.

ನ್ಯೂಜಿಲ್ಯಾಂಡ್ ನ ಸಂಸದರಾಗಿ ಆಯ್ಕೆಯಾಗಿರುವ ಡಾ.ಗೌರವ್ ಶರ್ಮಾ, ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿರುವುದು ಭಾರತೀಯ ಸಂಸ್ಕೃತಿಯ ಗೌರವ ಹೆಚ್ಚಿಸಿದೆ ಎಂದು ಶ್ಲಾಘಿಸಿದ ಪ್ರಧಾನಿ, ಅಜಂತಾ ಗುಹೆ ಸೇರಿದಂತೆ ಪಾರಂಪರಿಕ ತಾಣಗಳನ್ನು ಡಿಜಿಟಲೀಕರಣಗೊಳಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button