Latest

ಪ್ರಧಾನಿಯವರಿಂದ ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ಲಾಘನೆ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಕ್ಷರಶಃ ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತ ನೀಡುತ್ತಿದ್ದು, ದೇಶವನನ್ನು ಜೋಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ದಾವಣಗೆರೆಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡುತ್ತಿದ್ದರು. ದೇಶಕ್ಕಾಗಿ ತ್ಯಾಗ ಮಾಡಬೇಕೆಂನ್ನುವ ಮನೋಭಾವ ಸಂಪೂರ್ಣವಾಗಿ ಮರೆತು ಹೋಗಿರುವ ಸಂದರ್ಭದಲ್ಲಿ ಇಂದು ನರೇಂದ್ರ ಮೋದಿಯವರು ದೇಶ ಜೋಡಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ದಕ್ಷಿಣ ಭಾರತದಲ್ಲಿ ನಮ್ಮ ನಾಯಕರಾದ ಬಿ.ಎಸ್ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ನಮ್ಮ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದಿದೆ. ಜನರ ಸಮಸ್ಯೆಗಳನ್ನು ತಿಳಿದುಕೊಂಡು , ಜನರ ಧ್ವನಿಯಾಗಿ, ಒಬ್ಬರೇ ಇದ್ದಾಗಲೂ, 104 ಜನ ಇದ್ದಾಗಲೂ ಜನರ ಧನ್ವಿಯನ್ನು ಗಟ್ಟಿಗೊಳಿಸುತ್ತಾ ಬಂದಿದ್ದರಿಂದ ಪ್ರತಿಯೊಂದು ಹಳ್ಳಿಯಲ್ಲಿ ಯುವಕರು, ರೈತರು ಭಾರತೀಯ ಜನತಾ ಪಕ್ಷದೊಂದಿಗೆ ಗುರುತಿಸಿಕೊಳ್ಳುತ್ತಾ ಬಂದಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವ ಹಲವಾರು ಯೋಜನೆಗಳನ್ನು ನಮ್ಮ ರಾಜ್ಯ ಸರ್ಕಾರ ಕೈಜೋಡಿಸಿ ಮುನ್ನಡೆಸಿಕೊಂಡು ಹೋಗುವ ಕೆಲಸ ಮಾಡಲಿದೆ ಎಂದು ಅವರು ಹೇಳಿದರು.

Home add -Advt

ಇಂದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರಿಂದ ನಾವು ಪ್ರೇರಣೆ ಪಡೆದು ಇಡೀ ಭಾರತದಲ್ಲಿಯೇ ಪ್ರಥಮ ರಾಜ್ಯವಾಗಿ ಎಲ್ಲಾ ರೈತರ ಮಕ್ಕಳಿಗೆ ಪಿಯುಸಿ ಯಿಂದ ಉನ್ನತ ಶಿಕ್ಷಣದವರೆಗೂ ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಇದರಿಂದ ಸುಮಾರು 20 ಲಕ್ಷ ರೈತ ಕುಟುಂಬಗಳಿಗೆ ಇದರ ಪ್ರಯೋಜನವಾಗಲಿದೆ ಹಾಗೂ ಅದರ ಜೊತೆಗೆ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರಿಗೆ ಮಾಶಾಸನದ ಮೊತ್ತವನ್ನು ಹೆಚ್ಚಿಸಲಾಗಿದೆ.

ಜನಸ್ಪಂದನ ಹಾಗೂ ಜನಪರವಾಗಿ ಸರ್ಕಾರ ಇರಬೇಕೆನ್ನುವ ಕಾರಣಕ್ಕಾಗಿ ಟಿ.ಎಂ. ವಿಜಯ ಭಾಸ್ಕರ್ ಅವರ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ವರದಿಯನ್ನು ಅಧ್ಯಯನ ಮಾಡಿ ನವೆಂಬರ್ 1 ರಿಂದ ಅದರಲ್ಲಿರುವ ಪ್ರಮುಖ ವಿಚಾರಗಳನ್ನು ಅನುಷ್ಠಾನ ಮಾಡಲು ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಇದು ನಿಮ್ಮ ಸರ್ಕಾರ, ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರ ಜನರ ವಿಶ್ವಾಸವನ್ನು, ಜನರ ನಂಬಿಕೆಯನ್ನು ಉಳಿಸಿಕೊಂಡು ಹೋಗುತ್ತೇವೆ, ಭಾರತೀಯ ಜನತಾ ಪಕ್ಷದ ಆದರ್ಶಗಳನ್ನು, ಇಷ್ಟೇ ಅಲ್ಲದೆ ಜನಪರವಾಗಿರುವ, ಜನಮೆಚ್ಚುಗೆಯಾಗುವ ಒಂದು ಸರ್ಕಾರವನ್ನ ನೀಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು.

ನಾವು ಎಷ್ಟೇ ಒಳ್ಳೆಯ ಆಡಳಿತ ನೀಡಿದರೂ ಸಹ ಆ ಕಾರ್ಯಕ್ರಮಗಳನ್ನು ಮನೆ-ಮನೆಗೆ, ಮನ-ಮನಗಳಿಗೆ ತಲುಪಿಸುವ ಕೆಲಸ ಕಾರ್ಯಕರ್ತರಿಂದ ಹೊರೆತು ಬೇರೆಯವರಿಂದ ಸಾಧ್ಯವಿಲ್ಲ ಎಂದು ಹೇಳಿದರು.

ರಾಜ್ಯದ ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸಿಕೊಂಡ ಎರಡು ವರ್ಷಗಳ ಅವಧಿಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ.

ಅವರು ಬಂದ ನಂತರ ಪ್ರತಿ ಎರಡು ತಿಂಗಳಿಗೊಮ್ಮೆ ಕಾರ್ಯಕಾರಿ ಸಮಿತಿ ಸಭೆಯನ್ನು ನಿಯಮಿತವಾಗಿ ಮಾಡುತ್ತಾ ಬಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಡ್ರಾಪ್ ನೀಡಿದ್ದಕ್ಕೆ ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣ; ಇಂಥ ಘಟನೆ ಸಹಿಸಲ್ಲ ಎಂದ ಸಿಎಂ

Related Articles

Back to top button