Latest

ಪರಿಷತ್ ಗಲಾಟೆ; ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ-ಜೆಡಿಎಸ್ ನಿಯೋಗ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನ ಪರಿಷತ್ ನಲ್ಲಿ ನಡೆದ ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದೆ.

ಪರಿಷತ್ ನಲ್ಲಿ ಉಪಸಭಾಪತಿಯನ್ನು ಕಾಂಗ್ರೆಸ್ ಸದಸ್ಯರು ಎಳೆದಾಡಿದ ಪ್ರಕರಣ, ಗಲಾಟೆಗೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಸದಸ್ಯರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ದೂರು ನೀಡಿದರು. ಈ ವೇಳೆ ಸಭಾಪತಿ ಪೀಠದಲ್ಲಿ ಕುಳಿತಿದ್ದ ಸದಸ್ಯ ಚಂದ್ರಶೇಖರ್ ಪಾಟೀಲ್ ವಿರುದ್ಧವೂ ದೂರು ನೀಡಿದ್ದಾರೆ ಎನ್ನಲಾಗಿದೆ.

ನಿಯೋಗದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಆರ್.ಅಶೋಕ್, ಮಾಧುಸ್ವಾಮಿ, ರಮೇಶ್ ಗೌಡ, ಬಸವರಾಜ್ ಹೊರಟ್ಟಿ, ಪುಟ್ಟಣ್ಣ ಶೆಟ್ಟಿ, ಶಶಿಲ್ ನಮೋಶಿ ಇದ್ದರು.

Home add -Advt

Related Articles

Back to top button