Latest

*KPCC ಕಾರ್ಯಾಧ್ಯಕ್ಷರಾಗಿ ಬಿ.ಎನ್.ಚಂದ್ರಪ್ಪ ನೇಮಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್.ಚಂದ್ರಪ್ಪ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಬಿ.ಎನ್.ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಐಸಿಸಿ ಜನರಲ್ ಸಕ್ರೇಟರಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.

ದೃವನಾರಾಯಣ ಅವರ ನಿಧನದಿಂದಾಗಿ ಖಾಲಿಯಾದ ಜಾಗಕ್ಕೆ ಚಂದ್ರಪ್ಪ ಅವರನ್ನು ನೇಮಿಸಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ನೇಮಕವಾಗಿರುವ ಮಾಜಿ ಸಂಸದ ಚಂದ್ರಪ್ಪ ಅವರನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು. ಈ ವೇಳೆ ಮಾಜಿ ಸಚಿವರಾದ ಮೋಟಮ್ಮ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

Home add -Advt
https://pragati.taskdun.com/karnatakahavy-rain3-daysimd/

Related Articles

Back to top button