Kannada NewsKarnataka News

ಖಾಸಗಿ ಬಸ್ ಪಲ್ಟಿ: ಇಬ್ಬರು ಪ್ರಯಾಣಿಕರು ಸ್ಥಳದಲ್ಲೆ ಸಾವು

ಪ್ರಗತಿವಾಹಿನಿ ಸುದ್ದಿ: ಯಾದಗಿರಿ ಜಿಲ್ಲೆಯ ಶಹಾಪುರದ ತಾಲೂಕಿನ ಹತ್ತಿಗುಡೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಕಲಬುರಗಿಯಿಂದ ಬೆಂಗಳೂರು ಕಡೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ 37 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಹತ್ತಿಗುಡೂರು ಬಳಿಯ ಹಳ್ಳದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ಅವಘಡದಲ್ಲಿ ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ.

Home add -Advt

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಸುರಪುರ ಪೊಲೀಸರು ಖಾಸಗಿ ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಬಸ್‌ನಿಂದ ಹೊರತೆಗೆದು ಚಿಕಿತ್ಸೆಗಾಗಿ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಕೆಲ ಗಾಯಳುಗಳನ್ನು ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಲ್ಟಿಯಾದ ಖಾಸಗಿ ಬಸ್‌ನ್ನು ಕ್ರೇನ್ ಮೂಲಕ ತೆರವುಗೊಳಿಸಲಾಗಿದೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button