Latest

ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ; ಇಬ್ಬರು ಪತ್ರಕರ್ತರು, ಪೊಲೀಸರು ಸೇರಿ 9 ಜನರ ವಿರುದ್ಧ ಎಫ್ ಐ ಆರ್

ಪ್ರಗತಿವಾಹಿನಿ ಸುದ್ದಿ; ಗದಗ: ಪೊಲಿಸ್ ಪೇದೆ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಬ್ಲ್ಯಾಕ್ ಮೇಲ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಪತ್ರಕರ್ತರು, ಪೊಲೀಸರು ಸೇರಿದಂತೆ 9 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಗದಗದ ರಾಜೀವ್ ಗಾಂಧಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಅಜ್ಜನಗೌಡ ಪಾಟೀಲ್ ಎರಡು ದಿನಗಳ ಹಿಂದೆ ಡೆತ್ ನೋಟ್ ಬರೆದಿಟ್ಟು ಲಕ್ಕುಂಡಿ ಗ್ರಾಮದ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಡೆತ್ ನೋಟ್ ನಲ್ಲಿ ತನಗೆ ಇಬ್ಬರು ವರದಿಗಾರರು, ಐದು ಪೊಲೀಸರು ಸೇರಿದಂತೆ ಒಟ್ಟು 9 ಜನರು ಬ್ಲ್ಯಾಕ್ ಮೇಲ್ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಬರೆದಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಜನಪ್ರಿಯ ನ್ಯೂಸ್ ಚಾನಲ್ ವರದಿಗಾರ ಭೀಮನಗೌಡ ಪಾಟೀಲ್, ಪತ್ರಿಕೆ ವರದಿಗಾರ ಗಿರೀಶ್ ಕುಲ್ಕರ್ಣಿ, ಬೆಟಗೇರಿ ಬಡಾವಣೆ ಪೊಲೀಸ್ ಎಎಸ್ ಐ ಪುಟ್ಟಪ್ಪ ಕೌಜಲಗಿ, ಪೊಲೀಸ್ ಪೇದೆಗಳಾದ ಸಿ.ಆರ್.ನಾಯಕರ, ದಾದಾಪೀರ್ ಮಜಲಾಪೂರ, ಶರಣಪ್ಪ ಅಂಗಡಿ, ಅಂದಪ್ಪಾ ಹಂಜಿ ಹಾಗೂ ಡಬ್ಲಿಂಗ್ ಆರೋಪಿಗಳಾದ ವಿಠ್ಠಲ ಹಬೀಬ್, ಗುರುರಾಜ್ ತಳ್ಳಿಹಾಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಬೆಳಗಾವಿ: ಕಾರಾಗೃಹದಿಂದ ಪರಾರಿಯಾದ ವಿಚಾರಣಾಧೀನ ಕೈದಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button