Latest

ಪೊಲೀಸ್ ಫೈರಿಂಗ್: ಓರ್ವ ಬಲಿ, ಕರ್ಫ್ಯೂ ಜಾರಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ಸ್ಥಳಕ್ಕೆ ಕರೆಸಲಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಈ ವೇಳೆ ಓರ್ವ ವ್ಯಕ್ತಿ ಸಾವಿಗೀಡಾಗಿದ್ದಾನೆ.

ಕೆಜಿ ಹಳ್ಳಿ ಪೊಲೀಸ್ ಠಾಣೆ ಬಳಿ ಪರಿಸ್ಥಿತಿ ಕೈಮೀರಿದ ಸಂದರ್ಭದಲ್ಲಿ ಗುಂಡು ಹಾರಿಸಲಾಗಿದೆ. ಕೆಲವರಿಗೆ ಗಾಯಗಳಾಗಿದ್ದು, ಓರ್ವ ವ್ಯಕ್ತಿ ಮೃತನಾಗಿದ್ದಾನೆ.

Home add -Advt

ಪೊಲೀಸ್ ಕಮಿಷನರ್ ಕಮಲಪಂತ್ ಫೈರಿಂಗ್ ನಲ್ಲಿ ವ್ಯಕ್ತಿ ಸಾವಿಗೀಡಾಗಿದ್ದನ್ನು ಖಚಿತಪಡಿಸಿದ್ದಾರೆ.  ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ, ಸ್ಥಳದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಪೈಗಂಬರರ ಕುರಿತು ಬರಹ ಆರೋಪ: ಬೆಂಗಳೂರಿನಲ್ಲಿ ಭಾರಿ ದಾಂಧಲೆ

ಹೊತ್ತಿ ಉರಿಯುತ್ತಿದೆ ಬೆಂಗಳೂರು: ಪೊಲೀಸರ ನಿಯಂತ್ರಣಕ್ಕೆ ಸಿಗುತ್ತಿಲ್ಲ ಪರಿಸ್ಥಿತಿ

Related Articles

Back to top button