CrimeKannada NewsKarnataka News

*ಬೆಳ್ಳಂ ಬೆಳಗ್ಗೆ ರೌಡಿಶೀಟರ್‌ ಮೇಲೆ ಪೊಲೀಸರ ಫೈರಿಂಗ್*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಗ್ಗೆ ರೌಡಿಶೀಟರ್‌ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಗುಂಡಿನ ಸದ್ದಿನಿಂದ ರಾಜ್ಯ ರಾಜಧಾನಿ ಜನರು ಬೆಚ್ಚಿಬಿದ್ದಿದ್ದಾರೆ.

ಜೀವ (19) ಗುಂಡೇಟು ತಿಂದ ಆರೋಪಿ. ಸಬ್‌ ಇನ್‌ಸ್ಪೆಕ್ಟರ್‌ ಅಯ್ಯಪ್ಪ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಸಿಂಗೇನಾ ಅಗ್ರಹಾರದ ತೋಪಿನಲ್ಲಿ ಹೆಬ್ಬಗೋಡಿ ಪೊಲೀಸರು ಫೈರಿಂಗ್‌ ಮಾಡಿದ್ದಾರೆ. ಗಾಯಗೊಂಡಿರುವ ಆರೋಪಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ. 

Home add -Advt

ಹೆಬ್ಬಗೋಡಿಯ ತಿರುಪಾಳ್ಯದಲ್ಲಿ ರೌಡಿಶೀಟರ್‌ ಜೀವ ವಾಸವಾಗಿದ್ದಾನೆ. ಕೊಲೆ, ಸುಲಿಗೆ, ದರೋಡೆ ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದಾನೆ. 

ಕಳೆದ ವಾರ ಹೆಬ್ಬಗೋಡಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಆರೋಪಿ ದರೋಡೆ ಮಾಡಿದ್ದ. ನಟೋರಿಯಸ್ ರೌಡಿಶೀಟರ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ನಾಗೇಶ್ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ್ದ. ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದ. 

ಈ ವೇಳೆ ಸಬ್ ಇನ್‌ಸ್ಪೆಕ್ಟರ್‌ ಅಯ್ಯಪ್ಪ ಫೈರಿಂಗ್ ಮಾಡಿದ್ದಾರೆ. ಆರೋಪಿ ಕಾಲಿಗೆ ಗುಂಡಿಳಿಸಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button