GIT add 2024-1
Laxmi Tai add
Beereshwara 33

ಅಮಾಯಕ ಮಹಿಳಾ ಅಭ್ಯರ್ಥಿ ಮೇಲೆ ಎಫ್ ಐಆರ್ ದಾಖಲಿಸಿರುವುದು ನೀಚ ಹಾಗೂ ಹೇಡಿತನದ ರಾಜಕಾರಣ: ಡಿಕೆಶಿ

ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ

Anvekar 3
Cancer Hospital 2
 ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ‘ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ ಅವರ ವಿರುದ್ಧ ಸರ್ಕಾರ ಹಾಗೂ ಪೊಲೀಸರು ಎಫ್ ಐಆರ್ ದಾಖಲಿಸುವ ಮೂಲಕ ನೀಚ ಹಾಗೂ ಹೇಡಿತನದ ರಾಜಕಾರಣ ಮಾಡುತ್ತಿದ್ದಾರೆ. ಸರ್ಕಾರದ ಈ ಬೆದರಿಕೆ ತಂತ್ರಕ್ಕೆ ನಾವು ಹೆದರುವುದಿಲ್ಲ, ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಡುಗಿದ್ದಾರೆ.
ಸದಾಶಿವನಗರದ ತಮ್ಮ ಗೃಹಕಚೇರಿಯಲ್ಲಿ ಗುರುವಾರ ಬೆಳಗ್ಗೆ  ಪತ್ರಿಕಾಗೋಷ್ಠಿ ನಡೆಸಿ ಅವರು ಹೇಳಿದ್ದಿಷ್ಟು:
ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ ಹೆಣ್ಣುಮಗಳ ಮೇಲೆ ಪ್ರಕರಣ ದಾಖಲಿಸಿದ ನೀಚ ರಾಜಕಾರಣವನ್ನು ನನ್ನ ರಾಜಕೀಯ ಬದುಕಿನಲ್ಲಿ ಕಂಡಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಷ್ಟು ಹೊಲಸು ರಾಜಕೀಯವನ್ನು ಎಲ್ಲೂ ನೋಡಿಲ್ಲ. ಮುಗ್ಧ, ಅಮಾಯಕ, ನೊಂದ-ಬೆಂದ ಹೆಣ್ಣುಮಗಳ ಮೇಲೆ ದಬ್ಬಾಳಿಕೆ ತೋರಿಸುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಿದೆ.
ನಾವು ನಾಮಪತ್ರ ಸಲ್ಲಿಸಲು ಬೆಳಗ್ಗೆ 11.30 ರಿಂದ 12.30 ನಡುವೆ ಕಾಲಾವಕಾಶ ಪಡೆದಿದ್ದೆವು. ನಮ್ಮ ಪಕ್ಷದ ಅಭ್ಯರ್ಥಿ ಜತೆಗೆ ನಾನು ಹಾಗೂ ನಮ್ಮ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೇರೆ ಬೇರೆ ಮಾರ್ಗಗಳಿಂದ ಬಿಬಿಎಂಪಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದೆವು.
ಆದರೆ, ನಿನ್ನೆ ಬಿಬಿಎಂಪಿ ಕಚೇರಿಯ ಆವರಣದಲ್ಲಿ 100 ಮೀಟರ್ ದೂರದಲ್ಲಿ ಹಾಕಿದ್ದ ಬ್ಯಾರಿಕೇಡ್ ಅನ್ನು ತಳ್ಳಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಿ ಕುಸುಮಾ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನಿನ್ನೆ ನಾಮಪತ್ರ ಸಲ್ಲಿಕೆ ವೇಳೆ ಕುಸುಮಾ ಅವರ ಜತೆ ನಾನೂ ಇದ್ದೆ, ಸಿದ್ದರಾಮಯ್ಯನವರೂ ಇದ್ದರು. ನಮ್ಮ ಮೇಲೆ ಏಕೆ ಪ್ರಕರಣ ದಾಖಲಿಸಿಲ್ಲ. ಬಿಜೆಪಿ ಹಾಗೂ ಜನತಾದಳ ನಾಯಕರು ಕಾರ್ಯಕರ್ತರುಗಳು ಮೆರವಣಿಗೆ ಮಾಡಿಕೊಂಡು ಬ್ಯಾರಿಕೇಡ್ ದಾಟಿ ಒಳಗೆ ಬಂದಿಲ್ಲವೇ? ನಿಯಮ ಮೀರಿ ಮಂತ್ರಿಗಳು, ಉಪಮುಖ್ಯಮಂತ್ರಿಗಳು ತಮ್ಮ ಬೆಂಬಲಿಗರೊಂದಿಗೆ ಎಲ್ಲಿಯವರೆಗೆ ಬಂದಿದ್ದರು ಎಂಬುದಕ್ಕೆ ಅಲ್ಲೇ ಇದ್ದ ಮಾಧ್ಯಮಗಳು ಸಾಕ್ಷಿಯಾಗಿವೆ. ಅವರೆಲ್ಲರ ವಿರುದ್ಧ ಪ್ರಕರಣ ದಾಖಲಿಸದೆ ಕೇವಲ ಕುಸುಮಾ ಅವರ ವಿರುದ್ಧ ಮಾತ್ರ ನಿಯಮ ಉಲ್ಲಂಘನೆ ಆರೋಪ ಹೊರಿಸಿ ಪ್ರಕರಣ ದಾಖಲಿಸಲಾಗಿದೆ.
ಇದು ದುರುದ್ದೇಶಪೂರ್ವಕವಾಗಿ ಕೈಗೊಂಡ ಕೃತ್ಯ ಎನ್ನುವುದರಲ್ಲಿ ಸಂಶಯವಿಲ್ಲ. ಈಗಾಗಲೇ ಬಿಜೆಪಿ ಕಾರ್ಯಕರ್ತರ ಮೇಲೆ 1100 ಕೇಸು  ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೆ 400, ಜೆಡಿಎಸ್ ಕಾರ್ಯಕರ್ತರ ಮೇಲೂ 200 ಕೇಸು ಹಾಕಿದ್ದಾರೆ. ಮುನಿರತ್ನ ನಮ್ಮ ಶಾಸಕರಾಗಿದ್ದಾಗಲೇ ಕೇಸು ಹಾಕಿಸಿದ್ದಾರೆ.
ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಇಷ್ಟು ಕೇಸು ಹಾಕಿಸಿದ್ದಾರೆ. ಅಲ್ಲಿ ಯಾರು ಬಂದಿದ್ದರೋ ಅವರ ವಿವರದ ಸಾಕ್ಷಿ ನಮ್ಮ ಬಳಿ ಇದೆ. ಒಬ್ಬ ಹೆಣ್ಣು ಮಗಳ ಮೇಲೆ ಏಕೆ ಕೇಸು ಹಾಕಲಬೇಕು? ಹೆಣ್ಣುಮಗಳನ್ನು ಧೃತಿಗೆಡಿಸುವ ಈ ಯತ್ನ ಸಣ್ಣತನದ ರಾಜಕಾರಣಕ್ಕೆ ಸಾಕ್ಷಿ. ಇದಕ್ಕೆ ನಾವು ಹೆದರಲ್ಲ. ಮುಂದಿನ ದಿನಗಳಲ್ಲಿ ಜನ ಇದಕ್ಕೆ ಉತ್ತರ ಕೊಡಲಿದ್ದಾರೆ.
ನಾವು ಜಾಮೀನು ಪಡೆಯುತ್ತೇವೆ, ಹೆದರುತ್ತೇವೆ ಎಂದುಕೊಂಡರೆ ಅದು ಭ್ರಮೆ. ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರರು ಸಕ್ರಿಯವಾಗಿ ಪಾಲ್ಗೊಳ್ಳುವುದನ್ನು, ಅವರನ್ನು ಹೆದರಿಸಿ, ತಡೆಯಲು ಇಂಥದ್ದೊಂದು ಪ್ರಕರಣ ದಾಖಲಿಸಲಾಗಿದೆ.
ನಮ್ಮ ಅಭ್ಯರ್ಥಿ ಮೇಲೆ ಸುಳ್ಳು ಕೇಸು ಹಾಕಿದ ಸರ್ಕಲ್ ಇನ್ಸ್‌ಪೆಕ್ಟರ್ ವರ್ಗಾವಣೆ ಆಗಬೇಕು. ನಾವು ಬೆಳೆಸಿದ ವ್ಯಕ್ತಿ ಈಗ ಬಿಜೆಪಿ ಅಭ್ಯರ್ಥಿ. ಆತನನ್ನು ಬೆಳೆಸಿದ್ದಕ್ಕೆ ನಾವು, ಬಿಜೆಪಿ, ಜೆಡಿಎಸ್ನವರು ಪಶ್ಚಾತಾಪ ಪಡುತ್ತಿದ್ದೇವೆ. ಇವರಿಗೆ ಜನ ತಕ್ಕ ಪಾಠ ಕಲಿಸುತ್ತಾರೆ.
ನಿನ್ನೆ ಬಿಬಿಎಂಪಿ ಕಚೇರಿ ಬಳಿಯ ಎಲ್ಲ ಬೆಳವಣಿಗೆಗಳ ಡ್ರೋಣ್ ವೀಡಿಯೋ ಚಿತ್ರಣದ ಮಾಹಿತಿ ಪಡೆದಿದ್ದೇವೆ. ಅಧಿಕಾರಿಗಳನ್ನು ಬಳಸಿಕೊಂಡು ಹೇಡಿ ರಾಜಕಾರಣ ಮಾಡುತ್ತಿರುವ ಸರ್ಕಾರ ಕೈಗೆ ಬಳೆ ತೊಟ್ಟುಕೊಳ್ಳಬೇಕು.
ಪೊಲೀಸ್ ಆಯುಕ್ತರು ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಡಿಜೆ ಹಳ್ಳಿ ಘಟನೆಯಲ್ಲೂ ನಮ್ಮವರು ಭಾಗಿಯಾಗಿಲ್ಲ. ನಾವು ರಾಜಕೀಯ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ. ಪ್ರತಿಯೊಬ್ಬ ಕಾಂಗ್ರೆಸ್ ವ್ಯಕ್ತಿ ಪ್ರಾಮಾಣಿಕರು, ಅಮಾಯಕರಾಗಿದ್ದು, ಅವರ ಪರವಾಗಿ ನಿಲ್ಲುತ್ತೇನೆ.
ನಮ್ಮ ತತ್ವ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ:
ರಾಜರಾಜೇಶ್ವರಿ ನಗರ ವ್ಯಾಪ್ತಿಯಲ್ಲಿ ಮಾತ್ರವಲ್ಲ, ನಮ್ಮ ಪಕ್ಷದ ತತ್ವ, ಸಿದ್ಧಾಂತ, ನಾಯಕತ್ವ ಒಪ್ಪಿ ಬೇಷರತ್ತಾಗಿ ಬರುವವರನ್ನು  ಸಮಿತಿ ಮೂಲಕ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ.
Bottom Add3
Bottom Ad 2