Latest

ಸೋಮವಾರದ ಪಿಯು ಪರೀಕ್ಷೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -ಸೋಮವಾರ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದಕ್ಕೆ ಹೋಗಿದೆ.

ಸೋಮವಾರ ಅಂತಿಮ ಪರೀಕ್ಷೆ (ಇಂಗ್ಲೀಷ್) ನಡೆಯಬೇಕಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರಿಗೆ ಸಂಚಾರ ಬಂದ್ ಮಾಡಲಾಗಿದೆ. 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ.

Related Articles

ಇದರಿಂದಾಗಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಪರೀಕ್ಷೆ ಮುಂದೂಡಿ ಸರಕಾರ ಆದೇಶ ಹೊರಡಿಸಿದೆ.

ಮುಂದಿನ ದಿನಾಂಕ ಮಾರ್ಚ್ 31ರ ನಂತರ ಘೋಷಣೆಯಾಗಲಿದೆ.

ನಾಳೆಯಿಂದ ಬೆಳಗಾವಿ ಸೇರಿದಂತೆ 9 ಜಿಲ್ಲೆಗಳು ಲಾಕ್ ಡೌನ್; ನಾಳೆಯೂ ಬಸ್ ಸಂಚಾರ ಇಲ್ಲ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button