
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ.ವಿ.ಪ್ರ.ನಿ.ನಿ. ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಮಚ್ಛೆ ಉಪಕೇಂದ್ರದಿಂದ ಸರಬರಾಜು ಆಗುವ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ,.
ಬೆಳಗಾವಿ ತಾಲೂಕಿನ ದತ್ತ ನಗರ, ನಾವಗೇಕರ ನಗರ, ಹವಳ ನಗರ, ಗೋಡಸೆ ಕಾಲನಿ, ಓಂಕಾರ ನಗರ, ಮಚ್ಛೆ, ಝಾಡಶಾಪೂರ, ದೇಸೂರ, ಸುಸ್ಗ್ಯಾನಟ್ಟಿ, ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ರಂಗಧೋಳಿ, ಪೀರಣವಾಡಿ, ಖಾದರವಾಡಿ, ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ತೀರ್ಥಕುಂಡೆ, ಹುಂಚ್ಯಾನಟ್ಟಿ, ಅಶೋಕ ಐರನ್ ಕಾಲನಿ, ನಾವಗೆ, ವಾಘವಾಡೆ ಹಾಗೂ ಮಚ್ಚೆ ಔದ್ಯೋಗಿಕ ಕ್ಷೇತ್ರಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ಸಹ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ದಿನಾಂಕ:೦೭-೦೯-೨೦೨೫ ರಂದು ಮಧ್ಯಾಹ್ನ ೨ ರಿಂದ ಸಾಯಂಕಾಲ ೬ ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.